ಕರಾವಳಿ

ಕುಂಭಾಶಿ : ಆನೆಗುಡ್ಡೆ ದೇವಸ್ಥಾನಕ್ಕೆ ಸಚಿವ ಕೋಟ ಭೇಟಿ, ವಿಶೇಷ ಪೂಜೆ ಸಲ್ಲಿಕೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ಈ ದೇಶಕ್ಕೆ ಅಂಟಿರುವ ಕರೋನಾ ಮಹಾಮಾರಿ ಸೇರಿದಂತೆ ದುರ್ದಿನಗಳನ್ನು ದೂರವಾಗಿಸುವಂತೆ ಆನೆಗುಡ್ಡೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸೋಮವಾರ ಕುಂಭಾಶಿ ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ಅವರು ಮಾಧ್ಯಮದವರ ಬಳಿ ಮಾತನಾಡಿದರು.

Advertisement. Scroll to continue reading.

ನನಗೆ ಕೊಟ್ಟ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ. ಶೋಷಣೆಗೆ ಒಳಗಾದ ಬಡವನಿಗೆ ನ್ಯಾಯ ದೊರಕಿಸಿ, ಮುಖ್ಯ ಭೂಮಿಕೆಗೆ ಕರೆದುಕೊಂಡು ಬರಬೇಕಾಗಿದೆ. ಅವರಿಗೆ ಸೂರು, ನೀರು ಎಲ್ಲಾ ಮೂಲಭೂತ ಸೌಕರ್ಯ ದೊರೆಯುವಂತೆ ಮಾಡುತ್ತೇನೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಅವರಿಗೆ ಮನೆ ನಿರ್ಮಾಣ ಮಾಡಲು ೫ ಲಕ್ಷ ರೂ ನೀಡಲು ಹಣಕಾಸು ಇಲಾಖೆಯ ಜೊತೆ ಚರ್ಚೆ ನಡೆಸಿದ್ದೇನೆ. ಸೋಮವಾರ ಪುನಃ ಸಭೆ ಕರೆಯಲಾಗಿದೆ.

ಪಾರದರ್ಶಕವಲ್ಲದ ಯೋಜನೆಗಳನ್ನು ರದ್ದು ಪಡಿಸಿ ಬಡವರಿಗೆ ಮೂಲಭೂತ ಸೌಕರ್ಯ ನೀಡಲು ಬೇಕಾದ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು

ಸಂಘಟನೆಯ ಕಾರ್ಯಕರ್ತರ ಮೇಲೆ ಕೆಲವು ಸುಳ್ಳು ಕೇಸ್ ಗಳನ್ನು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಾಡಲಾಗಿತ್ತು. ಆ ಕೇಸ್ ಗಳನ್ನು ಹಿಂಪಡೆಯುವಂತೆ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದೇನೆ. ಸಕರಾತ್ಮಕವಾಗಿ ಸ್ಪಂದಿಸಿದ ಅವರು ಎಲ್ಲಾ ಫೈಲ್ ಗಳನ್ನು ತರಿಸಿ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ ಎಂದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com