ಕರಾವಳಿ

ಮಂಗಳೂರು : ಮಾಸ್ಕ್, ಗ್ಲೌಸ್ ಇಲ್ಲದೆ ಏನ್ ಆಡಳಿತ ಮಾಡ್ತೀರಾ?; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಬೊಮ್ಮಾಯಿ

0

ಮಂಗಳೂರು : ಮಾಸ್ಕ್, ಗ್ಲೌಸ್ ಇಲ್ಲದೆ ಏನ್ ಆಡಳಿತ ಮಾಡ್ತೀರಾ ಇಲ್ಲಿ? ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ? ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ? ಎಸ್ ಡಿಆರ್ ಎಫ್ ಫಂಡ್ ಇದೆಯಲ್ಲ, ಅದನ್ನು ಪಡೆದು ಇವತ್ತೇ ಖರೀದಿ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ದ.ಕ.ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ.

ಕೋವಿಡ್-19 ನಿಯಂತ್ರಣ ಸಂಬಂಧ ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ಈ ವೇಳೆ ಮಾಸ್ಕ್ ಹಾಗೂ ಗ್ಲೌಸ್ ನ ಕೊರತೆಯಾಗಿರುವ ವಿಚಾರವನ್ನು ಪ್ರಸ್ತಾಪಿಸಿದ ವೇಳೆ ಮುಖ್ಯಮಂತ್ರಿಗಳು ಗರಂ ಆದರು.

ಬೆಂಗಳೂರು ಬಿಟ್ಟು ಎಲ್ಲವನ್ನೂ ಇಲ್ಲೇ ಖರೀದಿಸಿ ಸಂಜೆ ನನಗೆ ರಿಪೋರ್ಟ್ ಮಾಡಿ ಎಂದರು.

Advertisement. Scroll to continue reading.

ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಗೂ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಅವರು, ಏನಯ್ಯ, ನೀನ್ ಏನ್ ಮಾಡ್ತಾ ಇದೀಯ ಇಲ್ಲಿ ಅಂತ ಹೇಳು? ನಿನ್ನತ್ರ ಏನು ಸಮಸ್ಯೆ ಇದೆ ಅಂತ ಡಿಸಿ ಗಮನಕ್ಕೆ ತರೋಕೆ ಗೊತ್ತಿಲ್ವಾ? ಮೋಸ್ಟ್ ಸೀನಿಯರ್ ಹೆಲ್ತ್ ಆಫೀಸರ್ ಆಗಿದ್ರೂ ನೀನ್ ಏನ್ ನಿದ್ದೆ ಮಾಡ್ತಾ ಇದೀಯಾ? ಮಾಸ್ಕ್, ಗ್ಲೌಸ್ ಎಷ್ಟು ಕೊರತೆ ಇದೆ ಅನ್ನೋದು ಲೆಕ್ಕ ಇಡೋಕೆ ಆಗಲ್ವಾ ನಿಂಗೆ? ನಿಮ್ಮ ಯಾವುದೇ ಸಮರ್ಥನೆ ನಂಗೆ ಬೇಡ, ಸಂಜೆಯೊಳಗೆ ನಂಗೆ ರಿಪೋರ್ಟ್ ಕೊಡಿ ಎಂದು ಅವರು ತಾಕೀತು ಮಾಡಿದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com