ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಲವ್ ಜಿಹಾದ್ ಹಾಗೂ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಹಿಂದು ಜಾಗರಣ ವೇದಿಕೆ ಬ್ರಹ್ಮಾವರ ತಾಲೂಕು ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಬ್ರಹ್ಮಾವರ ತಾಲೂಕು ತಹಶೀಲ್ದಾರ ರಾಜಶೇಖರ ಮೂರ್ತಿಯವರಿಗೆ ಮನವಿ ಸಲ್ಲಿಸಿದರು. ಹಿಂದು ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಡೆಸಿ ಭಯೋತ್ಪಾದಕ ಚಟುವಟಿಕೆಗೆ ಬಳಸುತ್ತಿದ್ದಾರೆ ಮತ್ತು ಮುಸಲ್ಮಾನರು ಮದುವೆಯಾದ ಹಿಂದು ಹೆಣ್ಣು ಮಕ್ಕಳ ಸದ್ಯದ ಸ್ಥಿತಿ ಗತಿಹೇಗಿದೆ ಎಂದು ತನಿಖೆ ಮಾಡಬೇಕು. ಭಯೋತ್ಪಾದಕ ಚಟುವಟಿಕೆಗೆ ಹಣ ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಹಚ್ಚಬೇಕು ಮತ್ತು ಮಂಗಳೂರಿನಲ್ಲಿ ಎನ್ಐಎ ಕಚೇರಿ ತೆರೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿತ್ತು.
ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಅಧ್ಯಕ್ಷ ಪ್ರವೀಣ್ ಯಕ್ಷಿಮಠ, ಕಾರ್ಯದರ್ಶಿ ಅಶೋಕ್ ಕುಮ್ರಗೋಡು, ಬ್ರಹ್ಮಾವರ ತಾಲೂಕು ಅಧ್ಯಕ್ಷ ರವಿ ಹೇರೂರು, ಪ್ರಧಾನ ಕಾರ್ಯದರ್ಶಿ ರಮೇಶ್ ಪಾಂಡೇಶ್ವರ, ಬ್ರಹ್ಮಾವರ ತಾಲೂಕು ನಿಧಿ ಪ್ರಮುಖ್ ಜ್ಞಾನೇಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
Advertisement. Scroll to continue reading.