ಹೆಬ್ರಿ : ಉಡುಪಿ ಜಿಲ್ಲಾ ಜನಾಶೀರ್ವಾದ ಯಾತ್ರೆಗೆ ಚಾಲನೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Published
0
ವರದಿ : ಶ್ರೀದತ್ತ ಹೆಬ್ರಿ
ಉಡುಪಿ : ಚುನಾವಣೆ ಇಲ್ಲದಿದ್ದರೂ ಯಾತ್ರೆ ಯಾಕೆ ಎಂಬ ಪ್ರಶ್ನೆ ಜನರಲ್ಲಿ ಮೂಡಿರಬಹುದು. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಸಂಪುಟದ ಹೊಸ ಸಚಿವರನ್ನು ಪರಿಚಯ ಮಾಡುವ ಸಂದರ್ಭದಲ್ಲಿ ಗಲಾಟೆ ಗದ್ದಲ ಎಬ್ಬಿಸಿ ಇದುವರೆಗೂ ಕಂಡಿರದ ಸನ್ನಿವೇಶ ಅಧಿವೇಶನದಲ್ಲಿ ಸೃಷ್ಟಿಯಾಯಿತು. ಈ ಹಿನ್ನೆಲೆಯಲ್ಲಿ 43 ನೂತನ ಸಚಿವರು ಅವರವರ ರಾಜ್ಯದಲ್ಲಿ ಜನತೆಗೆ ತಮ್ಮನ್ನು ಪರಿಚಯಿಸಲು ಬೆಂಬಲ ಆಶೀರ್ವಾದ ಪಡೆಯಲು ಜನಾಶೀರ್ವಾದ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಹೆಬ್ರಿ ರಾಮ ಮಂದಿರದಲ್ಲಿ ಬುಧವಾರ ಉಡುಪಿ ಜಿಲ್ಲೆಯ ಜನಾಶೀರ್ವಾದ ಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಪ್ರತಿ ಜಿಲ್ಲೆಗಳಲ್ಲೂ ಆಯಾ ಬೆಳೆಗೆ ಸಂಬಂಧಿಸಿದಂತೆ ಸಮಸ್ಯೆಗಳು ಕೃಷಿಕರ ಸಮಸ್ಯೆಗಳನ್ನು ಸರಕಾರದೊಂದಿಗೆ ಇಲಾಖೆ ಅಧಿಕಾರಿಗಳೊಂದಿಗೆ ಕುಳಿತು ಚರ್ಚಿಸಿ ಪರಿಹರಿಸಲಾಗುವುದು. ಕೇವಲ 7ವರ್ಷಗಳ ಅವಧಿಯಲ್ಲಿ ಪ್ರಪಂಚದಲ್ಲೇ ಭಾರತ ಆಹಾರ ಧಾನ್ಯಗಳ ರಫ್ತು ಮಾಡುವುದರಲ್ಲಿ ಒಂಬತ್ತನೇ ಸ್ಥಾನಕ್ಕೆ ತಲುಪಿರುವುದು ಹೆಮ್ಮೆಯ ವಿಷಯ ಎಂದರು. ಪ್ರಧಾನಿಯವರು 1.30 ಲಕ್ಷ ಕೋಟಿ ರೂ. ವನ್ನು ಕೃಷಿ ಅಭಿವೃದ್ಧಿ ರೈತರ ಕಲ್ಯಾಣಕ್ಕಾಗಿ ಮೀಸಲಿರಿಸಿದ್ದಾರೆ ಎಂದು ಸಚಿವರು ಹೇಳಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ರಘುಪತಿ ಭಟ್, ಉಸ್ತುವಾರಿ ಉದಯಕುಮಾರ್ ಶೆಟ್ಟಿ, ಮಹಾವೀರ ಹೆಗ್ಡೆ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಿರಣ್ ಕುಮಾರ್ ಕೊಡ್ಗಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ನವೀನ್ ಶೆಟ್ಟಿ .ಸತೀಶ್ ಪೈ ಹೆಬ್ರಿ. ದಿನೇಶ್ ಪೈ ಮುನಿಯಾಲು ಮತ್ತಿತರರು ಉಪಸ್ಥಿತರಿದ್ದರು .