ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಕಾಲಘಟ್ಟದಲ್ಲಿ 110 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಜಾನುವಾರು ಕಟ್ಟೆ ಶಾಲೆ ಅತಿಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ. ಜಿಲ್ಲೆಯ ಕೆಲವೇ ಕೆಲವು ಪ್ರಾಥಮಿಕ ಶಾಲೆಗಳಲ್ಲಿ ಒಂದು. ಹಾಗೆಯೇ ಪ್ರಸ್ತುತ 97 ವರ್ಷಗಳನ್ನು ಪೂರೈಸಿ ಶತಮಾನೋತ್ಸವದ ಹೊಸ್ತಿಲಲ್ಲಿದ್ದು ಮುಂದಿನ ದಿನಗಳಲ್ಲಿ ಶಾಸಕರು, ಹಳೆ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ, ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಶೀಘ್ರದಲ್ಲೇ ಶತಮಾನೋತ್ಸವ ಸಮಿತಿ ರಚಿಸಿ, ಜಿಲ್ಲೆಯಲ್ಲೇ ಮಾದರಿ ಸರ್ಕಾರಿ ಶಾಲೆ ಮಾಡುವ ಕುರಿತು ರೂಪುರೇಷೆ ರಚಿಸಲಾಗುವುದು ಎಂದು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದರು. ಅವರು ಬಿಲ್ಲಾಡಿ ಜಾನುವಾರು ಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ನೆರವು ನೀಡಿದ ಹಳೆ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಿಂಟರ್ ಅನ್ನು ಹಳೆವಿದ್ಯಾರ್ಥಿ ರಾಘವೇಂದ್ರ ಶೆಟ್ಟಿ, ಸಭೆ ಸಮಾರಂಭಗಳಿಗೆ ಅಗತ್ಯವಿದ್ದ 50 ಕುರ್ಚಿಯನ್ನು ಸುಬ್ರಮಣ್ಯ ಆಚಾರ್ಯ ಹಾಗೂ ಸಹೋದರಿಯರರು, ಶಾಲಾ ಮಕ್ಕಳಿಗೆ ಅಗತ್ಯವಿದ್ದ ನೋಟ್ ಬುಕ್ ನ್ನು ನಿವೃತ್ತ ಶಿಕ್ಷಕಿ ನಾಗು ಜಿ. ಕೋಟ್ಯಾನ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅಂಗಡಿಮಕ್ಕಿ ನೀಡಿದರು. ಈ ಸಂದರ್ಭ ಅವರೆಲ್ಲರನ್ನು ಅವರೆಲ್ಲರನ್ನ ಶಾಲೆಯ ಹಾಗೂ ಊರವರ ಪರವಾಗಿ ಸನ್ಮಾನಿಸಲಾಯಿತು. ಈ ವೇಳೆ ಗ್ರಾಮಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ನೈಲಾಡಿ, ಈ ಸಂದರ್ಭದಲ್ಲಿ ಬಿ ಆರ್ ಪಿ ಚಂದ್ರಶೇಖರ ಶೆಟ್ಟಿ, ನಿವೃತ್ತ ಶಿಕ್ಷಕ ಚಂದ್ರಶೇಖರ ಶೆಟ್ಟಿ, ಎಸ್ ಡಿ ಎಂ ಸಿ, ಅಧ್ಯಕ್ಷ ರಾಮಕೃಷ್ಣ ನಾಯ್ಕ್, ಪ್ರೇಮಾವತಿ ಶೆಟ್ಟಿ, ಕುಸುಮಾ ಆಚಾರ್ಯ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಸದಾಶಿವ ಕೆ. ಸ್ವಾಗತಿಸಿ, ಸಹಶಿಕ್ಷಕಿ ಸುಧಾ ಕೆ. ವಂದಿಸಿದರು. ಶಿಕ್ಷಕ ಗಣೇಶ್ ಮಡಿವಾಳ ಕಾರ್ಯಕ್ರಮ ನಿರೂಪಿಸಿದರು.
Advertisement. Scroll to continue reading.