ಕರಾವಳಿ

ಕೋಟ : ದಿನೇಶ್ ಗಾಣಿಗರಿಗೆ ಹುಟ್ಟೂರು ಸಮ್ಮಾನ; ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

0

ವರದಿ : ದಿನೇಶ್ ರಾಯಪ್ಪನಮಠ
ಕೋಟ : ಗಾಣಿಗ ಯುವ ಸಂಘಟನೆ ಹಾಗೂ ಮಹಿಳಾ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ದಿನೇಶ್ ಗಾಣಿಗ ಕೋಟ ಅವರಿಗೆ ಹುಟ್ಟೂರು ಸಮ್ಮಾನ, ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮುದ್ದುಕೃಷ್ಣ ಸ್ಪರ್ಧೆಯ ಬಹುಮಾನ ವಿತರಣೆ ಕೋಟತಟ್ಟು ಅಘೋರೇಶ್ವರ ಸಭಾಂಗಣದಲ್ಲಿ ಜರಗಿತು.
ಮುಂಬೈ ಗಾಣಿಗ ಸಮಾಜದ ಅಧ್ಯಕ್ಷ ಬಿ.ವಿ.ರಾವ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಗಾಣಿಗ ಸಮಾಜದ ಯುವ ಸಂಘಟನೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅದರಲ್ಲೂ ಕೋಟ ಘಟಕ ತನ್ನ ಸಮಾಜಮುಖಿ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಸಮಾಜದ ಬೆಳವಣಿಗೆಗಾಗಿ ಎಲ್ಲರೂ ಒಟ್ಟಾಗಿ ಒಂದಾಗಿ ದುಡಿಯುವ ಎಂದರು.
ಈ ಸಂದರ್ಭ ರಾಷ್ಟ್ರೀಯ ಮಾನವಹಹಕ್ಕು ಸಮಿತಿಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ದಿನೇಶ್ ಗಾಣಿಗ ಕೋಟ ಅವರ ಸಾಮಾಜಿಕ ಹೋರಾಟಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿ, ಸಮ್ಮಾನಿಸಿ ಗೌರವಿಸಲಾಯಿತು. ಎಸೆಸೆಲ್ಸಿ, ಪಿಯುಸಿಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.


ಸಂಘಟನೆಯ ಅಧ್ಯಕ್ಷ ವಿಶ್ವನಾಥ ಗಾಣಿಗ ಬೆಟ್ಲಕ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇಣುಗೋಪಾಲಕೃಷ್ಣ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಗಣೇಶ್ ಜಿ.ಚೆಲ್ಲೆಮಕ್ಕಿ, ಉದ್ಯಮಿ ಸುರೇಶ್ ಗಾಣಿಗ ಶೇವಧಿ ಕೋಟ, ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಉಪಾಧ್ಯಕ್ಷ ಸೂರ್ಯನಾರಾಯಣ ಗಾಣಿಗ, ಸಂಪರ್ಕ ಸುಧಾ ಪತ್ರಿಕೆಯ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಕೆ. ಪ್ರಾಣೇಶ್, ಕೋಟೇಶ್ವರ ಗಾಣಿಗ ಯುವಸಂಘಟನೆಯ ಅಧ್ಯಕ್ಷ ಅಭಿಲಾಷ್ ಬಿ.ಎ., ಕೋಟ ಗಾಣಿಗ ಯುವ ಸಂಘಟನೆ ಕಾರ್ಯದರ್ಶಿ ಗಣೇಶ್ ಗಾಣಿಗ ಚಿತ್ರಪಾಡಿ ಉಪಸ್ಥಿತರಿದ್ದರು.
ಮಹಿಳಾ ಸಂಘಟನೆಯ ಅಧ್ಯಕ್ಷೆ ಅನಿತಾ ಶ್ರೀಧರ್ ಗಾಣಿಗ ಗುಂಡ್ಮಿ ಸ್ವಾಗತಿಸಿ, ಜಿಲ್ಲಾ ಗಾಣಿಗ ಸಮಾಜದ ಮಾಜಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗಾಣಿಗ ಸಾಲಿಗ್ರಾಮ ಪ್ರಾಸ್ತಾವಿಕ ಮಾತನಾಡಿ, ಕೋಟ ಘಟಕದ ಖಜಾಂಚಿ ಗಿರೀಶ್ ಬೆಟ್ಲಕ್ಕಿ ಕಾರ್ಯಕ್ರಮ ನಿರೂಪಿಸಿ, ರಾಜೇಶ್ ಅಚ್ಲಾಡಿ ವಂದಿಸಿದರು.

ಮುದ್ದುಕೃಷ್ಣ ಸ್ಪರ್ಧೆ ವಿಜೇತರು:
ಗಾಣಿಗ ಯುವ ಸಂಘಟನೆ ಹಾಗೂ ಮಹಿಳಾ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ ಜರಗಿದ ಮುದ್ದುಕೃಷ್ಣ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಭವಿನ್ ಗಾಣಿಗ ಉಡುಪಿ ಪ್ರಥಮ, ನಮಿಶ್ ಕೋಟ ಹಾಗೂ ಆದ್ಯ ರವೀಂದ್ರ ದ್ವಿತೀಯ, ಸಂಪ್ರೀತ್ ಸುರತ್ಕಲ್ ತೃತೀಯ ಹಾಗೂ ಹಿರಿಯರ ವಿಭಾಗದಲ್ಲಿ ಅದಿತ್ರಿ ಬೆಂಗಳೂರು ಪ್ರಥಮ, ಸಾಕ್ಷತ್ ಆರ್. ಕೋಟೇಶ್ವರ ದ್ವಿತೀಯ, ಭುಮಿಕಾ ಚಿತ್ರಪಾಡಿ ತೃತೀಯ ಬಹುಮಾನ ಗಳಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com