ಕರಾವಳಿ

94ಸಿ ಅಕ್ರಮ ಸಕ್ರಮದ ಬಗ್ಗೆ ಹೆಬ್ರಿ ತಹಶೀಲ್ದಾರ್ ರಿಂದ ಸಾರ್ವಜನಿಕರಿಗೆ ಮಹತ್ವದ ಮಾಹಿತಿ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ತಹಶೀಲ್ದಾರ್ ಪುರಂದರ್ ಕೆ. ಇವರು ಗುರುವಾರ ತಾಲ್ಲೂಕು ಕಚೇರಿಯಲ್ಲಿ 94ಸಿ ಅಕ್ರಮ ಸಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ಮಾಧ್ಯಮದ ಮೂಲಕ ನೀಡಿದರು.
ರಾಜ್ಯ ಸರಕಾರದ ನೂತನ ಆದೇಶದಂತೆ 31-3-2022 ರ ದಿನಾಂಕದ ಅಂತ್ಯದವರೆಗೆ 94ಸಿ ನಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿತ್ತು. ಆದರೆ ಕೆಲವರು ಇದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಈಗ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸುತ್ತಿದ್ದಾರೆ. ಸರಕಾರದ ಆದೇಶದಲ್ಲಿ ದಿನಾಂಕ 1-1-2015 ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಯಾರೂ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿ ಅಲ್ಲಿ ವಾಸವಾಗಿರುತ್ತಾರೋ ಅವರು ಮಾತ್ರ 94c ನಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದೆಂದು ತಿಳಿಸಲಾಗಿದೆ.
ಆದರೆ ಇತ್ತೀಚೆಗೆ ಹೆಬ್ರಿ ತಾಲ್ಲೂಕಿನ ಕೆಲವೆಡೆ ಸರ್ಕಾರಿ ಜಾಗದಲ್ಲಿ ಮನೆ ಗಳು ಹಾಗೂ ಶೆಡ್ ಗಳು ನಿರ್ಮಿಸುತ್ತಿರುದು ತಾಲ್ಲೂಕು ಆಡಳಿತದ ಗಮನಕ್ಕೆ ಬಂದಿದೆ.ಅಂಥವರಿಗೆ ನೋಟಿಸ್ ನೀಡಲಾಗಿದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಒತ್ತುವರಿ ಮಾಡಿದ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com