ಕರಾವಳಿ

ಕುಂದಾಪುರ : ನೆಹರು ಮೈದಾನ ಸ್ವಚ್ಛಗೊಳಿಸಿ ಅಭಿವೃದ್ಧಿ ಪಡಿಸುವಂತೆ ತಹಶೀಲ್ದಾರ್ ಗೆ ಮನವಿ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ನೆಹರೂ ಮೈದಾನದ ಸ್ವಚ್ಛಗೊಳಿಸಿ, ಅಭಿವೃದ್ಧಿ ಪಡಿಸುವಂತೆ ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಶಾಂತಿನಿಕೇತನ ವಾರ್ಡ್ ನ ಪುರಸಭಾ ಸದಸ್ಯೆ ವನಿತಾ ಬಿಲ್ಲವ ಮನವಿ ಸಲ್ಲಿಸಿದ್ದಾರೆ. ಹಿಂದಿನಿಂದಲೂ ನೆಹರೂ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಆಟ ಆಡಲು ಸೂಕ್ತ ಸ್ಥಳವಾಗಿದೆ. ಸಮೀಪದಲ್ಲೇ ಹಿಂದುಳಿದ ವರ್ಗಗಳ ವಸತಿ ನಿಲಯವಿದ್ದು, ಇತ್ತೀಚೆಗೆ ಆಟದ ಮೈದಾನ ಸ್ವಚ್ಛಗೊಳಿಸದೆ ಸುತ್ತ ಮುತ್ತಲಿನ ಪ್ರದೇಶ ದುರ್ನಾತ ಬೀರುತ್ತಿದೆ. ಪೊದೆಗಳು ಬೆಳೆದಿದ್ದು, ಹತ್ತಿರದ ವಿದ್ಯಾರ್ಥಿಗಳಿಗೆ ವಿಷಜಂತುಗಳು ಬರುವ ಸಾಧ್ಯವಿದೆ. ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಆಟವಾಡಲು ಮೈದಾನಕ್ಕೆ ಬರುತ್ತಾರೆ ಹಾಗೂ ಕೂಲಿ ಕಾರ್ಮಿಕರು ಮೈದಾನದ ಬಳಿ ಮಲಗುತ್ತಾರೆ. ಇದರಿಂದ ವಿಷಜಂತುಗಳಿಂದ ಅವರಿಗೆ ಅಪಾಯ ಆಗುವ ಸಾಧ್ಯತೆ ಇದೆ.
ಈ ಹಿಂದೆ ಆಡಳಿತ ಮಂಡಳಿಯವರು ಕುಂದಾಪುರ ತಾಲೂಕು ಕಛೇರಿಯ ಕಂದಾಯ ಇಲಾಖೆ ಅಧೀನದಲ್ಲಿರುವ ನೆಹರು ಮೈದಾನವನ್ನು ಪುರಸಭೆಗೆ ಹಸ್ತಾಂತರ ಮಾಡಬೇಕೆಂದು ಕೇಳಿಕೊಂಡಿರುತ್ತಾರೆ. ಆದರೆ, ಪುರಸಭೆಗೆ ಹಸ್ತಾಂತರವಾಗದೇ ಪುರಸಭೆಯವರಿಗೆ ಯಾವುದೇ ರೀತಿಯ ಅಭಿವೃದ್ಧಿ ಪಡಿಸುವುದಾಗಲೀ ಮಾಡಲು ಸಾಧ್ಯವಾಗುವುದಿಲ್ಲ. ಜನರು ನೆಹರು ಮೈದಾನವನ್ನು ಸ್ವಚ್ಛಗೊಳಿಸಿ ಸುತ್ತ ಆವರಣ ಗೋಡೆಯನ್ನು ನಿರ್ಮಿಸಿ ಮೈದಾನವನ್ನು ಸುರಕ್ಷಿಸಬೇಕೆಂದು ಕೇಳಿಕೊಂಡಿರುತ್ತಾರೆ. ಕಂದಾಯ ಇಲಾಖೆಯ ಅಧೀನದಲ್ಲಿರುವ ನೆಹರು ಮೈದಾನವನ್ನು ತಕ್ಷಣ ಸ್ವಚ್ಛಗೊಳಿಸಿ ಸುತ್ತಲೂ ಆವರಣ ಗೋಡೆ ನಿರ್ಮಿಸಿ ಮೈದಾನವನ್ನು ರಕ್ಷಿಸುವ ಹಾಗೂ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯನ್ನು ಸರಿಪಡಿಸಿಕೊಡಬೇಕಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

Advertisement. Scroll to continue reading.
Click to comment

You May Also Like

ಕರಾವಳಿ

1 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com