ಚಂದನವನ : ಚಂದನವನದ ಹಿರಿಯ ನಟ ಸತ್ಯಜಿತ್ (72) ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಗುರುವಾರ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿದೆ. ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದ್ದು, ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪುತ್ರ ಆಕಾಶ್ ತಿಳಿಸಿದ್ದಾರೆ.
Advertisement. Scroll to continue reading.
ಸತ್ಯಜಿತ್ 600 ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನೆಗೆಟೀವ್ ಶೇಡ್ ನಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಗಮನ ಸೆಳೆದಿದ್ದಾರೆ.
‘ಅರುಣ ರಾಗ’, ‘ಅಂತಿಮ ತೀರ್ಪು’, ‘ಶಿವ ಮೆಚ್ಚಿದ ಕಣ್ಣಪ್ಪ’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಮನೆದೇವ್ರು’, ‘ಮಂಡ್ಯದ ಗಂಡು’ ‘ಅಪ್ಪು’, ‘ಧಮ್’, ‘ಅಭಿ’, ‘ಆಪ್ತಮಿತ್ರ’, ‘ಅರಸು’, ‘ಇಂದ್ರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಮೊದಲಾದ ಚಿತ್ರಗಳಲ್ಲಿ ಸತ್ಯಜಿತ್ ನಟಿಸಿದ್ದಾರೆ.
Advertisement. Scroll to continue reading.