ನಾಡಿನ ಹೆಸರಾಂತ ಚಿಂತಕ, ಲೇಖಕ ಕನ್ನಡದ ಹಿರಿಯ ನಟ ಜಿ.ಕೆ ಗೋವಿಂದರಾವ್ ಹುಬ್ಬಳ್ಳಿಯ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ.
ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಾಹಿತ್ಯ ಸಾಧನೆ :
Advertisement. Scroll to continue reading.
ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ ಇತ್ಯಾದಿ
ಕಲಾವಿದನಾಗಿ :
ಜಿ.ಕೆ.ಗೋವಿಂದ ರಾವ್ ಗ್ರಹಣ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ, ರಂಗಭೂಮಿಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಧಾರಾವಾಹಿಗಳಲ್ಲೂ ಪಾತ್ರವಾಗಿದ್ದಾರೆ.
ಗ್ರಹಣ, ಕರ್ಫ್ಯೂ, ನಿಶ್ಯಬ್ಧ, ಶಾಸ್ತ್ರಿ, ಮಿಥಿಲೆಯ ಸೀತೆಯರು ಮೊದಲಾದ ಚಿತ್ರಗಳಲ್ಲಿ ಪಾತ್ರವಾಗಿದ್ದಾರೆ.
Advertisement. Scroll to continue reading.