ಬ್ರಹ್ಮಾವರ : ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಬಿಲ್ಲಾಡಿ ಮತ್ತು ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆಯ 5ನೇ ವರ್ಷದ ಶಾರದೋತ್ಸವ
Published
0
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಬಿಲ್ಲಾಡಿ ಮತ್ತು ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಇದರ ಆಶ್ರಯದಲ್ಲಿ 5ನೇ ವರ್ಷದ ಶಾರದೋತ್ಸವದ ನಾನಾ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಿತು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ಗ್ರಾಮೀಣ ಭಾಗವಾದ ಬಿಲ್ಲಾಡಿಯಲ್ಲಿ ಶಾರದೋತ್ಸವದ ಮೂಲಕ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ ಹಿಂದೂ ಧಾರ್ಮಿಕತೆಯ ಜೊತೆಗೆ ಸಮಿತಿಯಿಂದ ಇನ್ನಷ್ಟು ಸಮಾಜಮುಖಿ ಕಾರ್ಯಗಳಾಗಲಿ ಎಂದರು.
ಇದೇ ಸಂದರ್ಭದಲ್ಲಿ ಶಾರದೋತ್ಸವದ ಪ್ರಯುಕ್ತ ಗೋವಿಗಾಗಿ ಮೇವು ಅಭಿಯಾನದಡಿ ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ವಂಡಾರು ಹಸಿ ಹುಲ್ಲನ್ನು ಹಸ್ತಾಂತರಿಸಿದರು. ನಿವೃತ್ತ ಶಿಕ್ಷಕ ಚಂದ್ರಶೇಖರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ ಕೆ ಹೆಗ್ಡೆ, ಶಾರದೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷ ಪ್ರಥ್ವಿ ರಾಜ್ ಶೆಟ್ಟಿ ಬಿಲ್ಲಾಡಿ, ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಅಧ್ಯಕ್ಷ ಪ್ರಿಯದರ್ಶನ್ ಶೆಟ್ಟಿ, ಶಾರದೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ್, ಹೆಗ್ಗುಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ, ಗ್ರಾ.ಪಂ ಸದಸ್ಯ ಗುರುಪ್ರಸಾದ್ ನೀರ್ಜೆಡ್ಡು, ಗ್ರಾ.ಪಂ ಉಪಾದ್ಯಕ್ಷ ಪ್ರಕಾಶ್ ಶೆಟ್ಟಿ ನೈಲಾಡಿ,ಮಾಜಿ ತಾ.ಪಂ ಸದಸ್ಯೆ ನಿರ್ಮಲಾ ಶೆಟ್ಟಿ, ಮಾಜಿ ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ ಶೆಟ್ಟಿ, ಶಾರದೋತ್ಸವ ಸಮಿತಿ ಮಹಿಳಾ ಅಧ್ಯಕ್ಷೆ ವೀಣಾ ಕೊಠಾರಿ, ಪ್ರಧಾನ ಕಾರ್ಯದರ್ಶಿ ಅಕ್ಷತ್ ಕುಂದರ್ ಉಪಸ್ಥಿತರಿದ್ದರು.
Advertisement. Scroll to continue reading.
ಇದೇ ಸಂದರ್ಭದಲ್ಲಿ ಸಂಗೀತ ರಸಮಂಜರಿ, ಹುಲಿವೇಶ ಕುಣಿತ ಯುವತಿಯರ ಮರಕಾಲು ಕಟ್ಟಿ ಹುಲಿ ವೇಷ ಕುಣಿತ ಶಾರದೋತ್ಸವದ ಪುರ ಮೆರವಣಿಗೆಯ ಕಳೆ ಹೆಚ್ಚಿಸಿತ್ತು.