ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಹಂಗಳೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಕಾರ್ಯಕ್ರಮಗಳ ಕುರಿತು ಎಲ್ ಇ ಡಿ ವಾಲ್ ಸಂಚಾರಿ ವಾಹನದ ಮೂಲಕ ಹಂಗಳೂರು ಗ್ರಾಮ ಪಂಚಾಯತಿಯ ಪ್ರತಿಯೊಂದು ವಾರ್ಡಿನಲ್ಲಿಯು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಉಪಾಧ್ಯಕ್ಷೆ ಶಾಲಿನಿ, ಪಿ.ಡಿ.ಓ ರಾಜೇಶ್ ಕೆ.ಸಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಸತೀಶ್ ಶೇರಿಗಾರ್, ಜಲಜಾ ಚಂದನ್, ವನಜ, ರೋಷನ್, ಕೋಡಿ ಪ್ರಾಥಮಿಕ ವೈದ್ಯಾಧಿಕಾರಿ ಡಾ/ಉಮೇಶ್ ನಾಯಕ್, ಉಪ ಆರೋಗ್ಯ ಶಿಕ್ಷಣ ಅಧಿಕಾರಿ ಚಂದ್ರಕಲಾ ಮತ್ತು ಆಶಾಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
Advertisement. Scroll to continue reading.