ಕರಾವಳಿ

ಕುಂದಾಪುರ : ಸಂಶಯಾಸ್ಪದ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ: ಸಂಘಟನೆಯಿಂದ ಡಿವೈಎಸ್ಪಿಗೆ ಮನವಿ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತರಾಗಿದ್ದ ಬಸ್ರಿಬೇರು ಕೇರಿಜೆಡ್ಡು ಲಚ್ಚು ನಾಯ್ಕ್ ಅವರ ಪುತ್ರ ಪ್ರಶಾಂತ ಅವರ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಬೈಂದೂರು ವಲಯ ಮರಾಠಿ ಸಮಾಜ ಸುಧಾರಕ ಸಂಘದ ವತಿಯಿಂದ ಡಿವೈಎಸ್ಪಿ ಶ್ರೀಕಾತ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಹೋಟೇಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಶಾಂತ ತಾಯಿಗೆ ದೂರವಾಣಿ ಕರೆ ಮಾಡಿ, ಸಹೋದರನ ಖಾತೆಗೆ 5,000 ರೂ. ಹಾಕಿರುವುದಾಗಿ ಹೇಳಿದ್ದಲ್ಲದೆ, ತುಳಸಿ ಪೂಜೆಗೆ ಮನೆಗೆ ಬರುವುದಾಗಿ ತಿಳಿಸಿದ್ದರು. ಅದರ ನಂತರದಲ್ಲಿ ನಡೆದ ಬೆಳವಣಿಗೆಗಳು ಸಂಶಯಾಸ್ಪದವಾಗಿರುವುದರಿಂದ ಹಾಗೂ ಆತನ ಸಾವಿನ ನಂತರ ಹೋಟೆಲ್ ಮಾಲಿಕ ವರ್ಗ ದುರಂತ ಘಟಿಸಿದ ಸ್ಥಳಕ್ಕೆ ಬಂದು ಹೋಗಿರುವುದು ಬಿಟ್ಟರೆ, ಮರಣೋತ್ತರ ಶವ ಪರೀಕ್ಷೆ ನಡೆಯುವ ಸ್ಥಳಕ್ಕೆ ಹಾಗೂ ಅವರ ಮನೆಗೆ ಬಾರದೆ ಇರುವುದು ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳದೆ ಇರುವುದು ಸಂಶಯಗಳನ್ನು ಮೂಡಿಸುತ್ತಿದ್ದು, ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿದರು.

Advertisement. Scroll to continue reading.

ಬೈಂದೂರು ವಲಯ ಮರಾಠಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಬೋಜು ನಾಯ್ಕ್, ಕುಂದಾಪುರ ಲ್ಯಾಂಪ್ ಸೊಸೈಟಿ ಅಧ್ಯಕ್ಷ ಸಂತೋಷ ನಾಯ್ಕ್ ಮೂದೂರು, ಸಿದ್ದೇಶ್ವರ ಮರಾಠಿ ಕ್ರೆಡಿಟ್ ಕೊ-ಅಪರೇಟವ್ ಸೊಸೈಟಿ ಜಡ್ಕಲ್ ನ ಅಧ್ಯಕ್ಷ ಮಹಾಲಿಂಗ ನಾಯ್ಕ್ , ಜಯರಾಮ್ ನಾಯ್ಕ್ ಯಡಮೊಗೆ, ಚಂದ್ರ ನಾಯ್ಕ್ ಬೀಸಿನಪಾರೆ, ಶೇಷು ನಾಯ್ಕ್ ಶಂಕರನಾರಾಯಣ, ಚಂದ್ರಮೋಹನ್ ಸೈಕೋಡು, ದಿನೇಶ್ ನಾಯ್ಕ್ ಕೆರಾಡಿ ಇದ್ದರು.

Click to comment

You May Also Like

ಕರಾವಳಿ

1 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com