ಹೆಬ್ರಿ : ತಾಲ್ಲೂಕು ಆಡಳಿತದಿಂದ ಸೋಮವಾರ ತಾಲ್ಲೂಕು ಕಚೇರಿ ಆವರಣದಲ್ಲಿ ಅರವತ್ತಾರನೆಯ ಕನ್ನಡ ರಾಜ್ಯೋತ್ಸವ ನಡೆಯಿತು. ರಾಷ್ಟ್ರ ಧ್ವಜಾರೋಹಣ ಮತ್ತು ರಾಜ್ಯೋತ್ಸವ ದಿನಾಚರಣೆ ಸಂದೇಶವನ್ನು ಹೆಬ್ರಿ ತಾಲ್ಲೂಕು ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿ ಕೆ. ಪುರಂದರ್ ನೆರವೇರಿಸಿದರು.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಶಶಿಧರ್ ಕೆ. ಜಿ., ಹೆಬ್ರಿ ಗ್ರಾಪಂ ಅಧ್ಯಕ್ಷೆ ಮಾಲತಿ, ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ್ ಟಿ .ಎಂ, ಅಜೆಕಾರು ಪೊಲೀಸ್ ಠಾಣಾಧಿಕಾರಿ ಸುದರ್ಶನ್, ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್, ಕಂದಾಯ ನಿರೀಕ್ಷಕ ಹಿತೇಶ್, ಯು.ಬಿ. ಪೋಲಿಸ್ ಸಿಬ್ಬಂದಿಗಳು, ತಾಲ್ಲೂಕು ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜನಪ್ರತಿನಿಧಿಗಳು ಹಾಗೂ ಊರಿನ ಗಣ್ಯರು ಮತ್ತಿತರರು ಉಪಸ್ಥಿತರಿದ್ದರು. ಸೀತಾನದಿ ವಿಠ್ಠಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.