ಬ್ರಹ್ಮಾವರ: ಅಜಪುರ ಕರ್ನಾಟಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ
Published
0
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಅಜಪುರ ಕರ್ನಾಟಕ ಸಂಘ ಬ್ರಹ್ಮಾವರ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಸಭಾ ಕಾರ್ಯಕ್ರಮ ಮಂಗಳವಾರ ರಾತ್ರಿ ಜರುಗಿತು. ಕನ್ನಡ ತಾಯಿ ಭುವನೇಶ್ವರೀ ದೇವಿಗೆ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಮಾಲಾರ್ಪಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಜಿಲ್ಲೆಯ ಪ್ರಥಮ ಕನ್ನಡ ಪರ ಸಂಘಟನೆ. 56 ವರ್ಷದಿಂದ ಬೆಳೆದು ಬಂದು ಅದನ್ನು ಮುಂದುವರಿಸಲು ಇಲ್ಲಿನ ಯುವ ಜನತೆ ಮತ್ತು ಹಣವಂತರು ಪ್ರೋತ್ಸಾಹಿಬೇಕಾಗಿದೆ ಎಂದರು.
ಅಜಪುರ ಕರ್ನಾಟಕ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಕಾರ್ಯದರ್ಶಿ ಮೋಹನ ಉಡುಪ, ಚಾಂತಾರು , ಹಾರಾಡಿ, ಹಂದಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಮೀರಾ ಸದಾನಂದ ಪೂಜಾರಿ, ಪ್ರಭಾಕರ ಶೆಟ್ಟಿ ಮತ್ತು ಉದಯ ಪೂಜಾರಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪರಿಸರದ ಕನ್ನಡ ಮಾಧ್ಯಮದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮ ಜರುಗಿತು. ಬಳಿಕ ಮಧುರ ಗೀತೆಗಳ ಮಧುರ ಗಾನ ಸಂಗೀತ ರಸಮಂಜರಿ ಜರುಗಿತು.