ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನವೆಂಬರ್ 7ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಕರ್ನಾಟಕ, ದಕ್ಷಿಣ ಕನ್ನಡ, ಉಉಡಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ನವೆಂಬರ್ 7ರ ನಂತರ ಮಳೆ ಕಡಿಮೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದಂತ ಬೀದರ್, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ನವೆಂಬರ್ 7ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
Advertisement. Scroll to continue reading.
ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬಳ್ಳಾರಿ, ರಾಮನಗರ, ಮಂಡ್ಯ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮುಂದಿನ ವಾರಾಂತ್ಯದ ವರೆಗೆ ಮಳೆಯಾಗಲಿದೆ. ಭಾನುವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.