ಬೆಂಗಳೂರು : ರೇಸ್ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ‘ಕುದುರೆ ರೇಸ್’ ಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುದುರೆ ಓಟದ ಸ್ಪರ್ಧೆಗಳನ್ನು ಮುಂದುವರೆಸುವುದಕ್ಕೆ ಅನುಮತಿ ನೀಡಿದೆ. ಕೋವಿಡ್ ನಿಯಮಗಳನ್ನು ಪಾಲಿಸಲು ಆದೇಶಿಸಿದೆ. ರೇಸ್ ಕೋರ್ಟ್ ಗೆ ಪ್ರವೇಶಿಸುವವರು ಲಸಿಕೆ ಪಡೆದಿರಬೇಕು. ಹೌದು, ರೇಸ್ ಕೋರ್ಟ್ ಪ್ರವೇಶಕ್ಕೆ ಕಡ್ಡಾಯಯವಾಗಿ ಲಸಿಕೆ ಪಡೆದಿರಬೇಕು ಎಂದು ಸರ್ಕಾರ ಷರತ್ತು ವಿಧಿಸಿದೆ. ಇನ್ನು ಸ್ಥಳಾವಕಾಶದ ಸಾಮರ್ಥ್ಯವನ್ನ ಆಧರಿಸಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಸೂಚಿಸಿದೆ.
Advertisement. Scroll to continue reading.