ನವದೆಹಲಿ : 1997ರಲ್ಲಿ ದೆಹಲಿಯ ಉಪಹಾರ್ ಥಿಯೇಟರ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 59 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಗಳಾದ ಸುಶೀಲ್ ಅನ್ಸಾಲ್ ಮತ್ತು ಗೋಪಾಲ್ ಅನ್ಸಾಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಟಿಯಾಲಾ ಹೌಸ್ ಆದೇಶಿಸಿದೆ. ಜೊತೆಗೆ ತಲಾ 2.25 ಕೋಟಿ ರೂ. ದಂಡ ವಿಧಿಸಿದೆ
1997 ರಲ್ಲಿ ಉಪಹಾರ್ ಚಿತ್ರಮಂದಿರಲ್ಲಿ ‘ಬಾರ್ಡರ್’ ಸಿನಿಮಾವನ್ನು ಪ್ರದರ್ಶಿಸಲಾಗಿತ್ತು. ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿತ್ತು. ಚಿತ್ರಮಂದಿರದಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಇಲ್ಲದ ಕಾರಣ 59 ಜನರು ಮೃತಪಟ್ಟಿದ್ದರು. 100 ಕ್ಕೂ ಹೆಚ್ಚು ಜನರು ಕಾಲ್ತುಳಿತದಲ್ಲಿ ಗಾಯಗೊಂಡಿದ್ದರು. ಘಟನೆ ಸಂಬಂಧಿಸಿ ಆರೋಪಿಗಳಾದ ಹರ್ ಸ್ವರೂಪ್ ಪನ್ವಾರ್ ಮತ್ತು ಧರ್ಮವೀರ್ ಮಲ್ಹೋತ್ರಾ ಅವರು ವಿಚಾರಣೆಯ ವೇಳೆ ಮೃತಪಟ್ಟಿದ್ದರು.
Advertisement. Scroll to continue reading.