ವರದಿ : ದಿನೇಶ್ ರಾಯಪ್ಪನಮಠ
ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರು ಸಂಸದರ ಅನುದಾನ ಬಳಕೆಯಲ್ಲಿ ದೇಶಕ್ಕೆ 2 ಸ್ಥಾನ ಪಡೆದಿದ್ದಾರೆ. ಈ ಮೂಲಕ ಮಾದರಿ ಸಂಸದರಾಗಿ ಹೊರಹೊಮ್ಮಿದ್ದಾರೆ. ತಮ್ಮ ಸಂಸದರ ನಿಧಿಯಡಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವು ಜನಪರ ಅಭಿವದ್ಧಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸುತ್ತಿದ್ದಾರೆ. ಹೀಗಾಗಿ ಸಂಸದರ ನಿಧಿ ಬಳಕೆಯಲ್ಲಿ ಅವರು ದೇಶಕ್ಕೆ ಎರಡನೇ ಸ್ಥಾನದಲ್ಲಿದ್ದಾರೆ.
2019-20ರ ಸಾಲಿಗೆ ಸಂಬಂಧಿಸಿದಂತೆ 5 ಕೋಟಿ ರೂ.ಅನುದಾನ ಹಾಗೂ 10 ರಿಂದ 15ನೇ ಲೋಕಸಭೆ ವರೆಗೆ ಬಳಕೆಯಾಗದೆ ಇದ್ದ 4.40 ಕೋಟಿ ರೂ. ಅನುದಾನವೂ ಸೇರಿದಂತೆ, 9.40 ಕೋಟಿ ರೂ.ದಲ್ಲಿ ಈಗಾಗಲೇ 9 ಕೋಟಿ ರೂ. ಬಳಕೆ ಮಾಡಿದ್ದಾರೆ.
Advertisement. Scroll to continue reading.
ಯಾವುದಕ್ಕೆ ಎಷ್ಟೆಷ್ಟು ಬಳಕೆಯಾಗಿದೆ :
ಸಾರ್ವಜನಿಕ ಬಸ್ ಶೆಲ್ಟರ್, ಹೈಮಾಸ್ಟ್ ಲೈಟ್, ಶಾಲಾ ಕೊಠಡಿ ಮತ್ತು ಸಾರ್ವಜನಿಕ ಸಮುದಾಯ ಭವನಕ್ಕೆ 4.70 ಕೋಟಿ ರೂ., ರಸ್ತೆ ನಿರ್ಮಾಣಕ್ಕೆ 2.93 ಕೋಟಿ ರೂ. ಅನುದಾನ ಬಳಕೆ ಮಾಡಿದ್ದಾರೆ. ಅಲ್ಲದೇ ಕೊರೋನಾ ನಿರ್ವಹಣೆಗೆ ಆರೋಗ್ಯ ಇಲಾಖೆಗೆ ಆಂಬುಲೆನ್ಸ್ ಮತ್ತು ಡಯಾಲಿಸಿಸ್ ಯಂತ್ರ ಅಳವಡಿಕೆಗೆ 82.50 ಲಕ್ಷ ರೂ. ಬಳಸಿದ್ದಾರೆ.
ಕುಡಿಯುವ ನೀರಿನ ಘಟಕಕ್ಕೆ 42 ಲಕ್ಷ ರೂ. ಹಾಗೂ ಅಂಗವಿಕಲರಿಗೆ ತ್ರಿಚಕ್ರ ವಾಹನ, ಇತ್ಯಾದಿ ಅನೇಕ ಉಪಯುಕ್ತ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಉಳಿದ ಅನುದಾನ ಬಳಕೆ ಮಾಡುವ ಮೂಲಕ ಸಾರ್ವಜನಿಕರ ಅನುಕೂಲವಾಗುವ ಎಲ್ಲಾ ಕಾಮಗಾರಿಗಳನ್ನು ಮಾಡಿಸುವುದರ ಮೂಲಕ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೂ ಕಾರಣರಾಗಿದ್ದಾರೆ.
ಎರಡು ಕೋಟಿ ರೂ. ಅನುದಾನ ಬಿಡುಗಡೆ :
ಕರೊನಾ ಸಾಂಕ್ರಾಮಿಕ ರೋಗದ ಹರಡುವಿಕೆಯ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21 ಹಾಗೂ 2021-22ರ ಎರಡು ವರ್ಷಗಳ ಸಂಸದರ ನಿಧಿಯನ್ನು ಕರೊನಾ ಸಂಕಷ್ಟದ ಆರ್ಥಿಕ ಪರಿಸ್ಥಿತಿ ನಿರ್ವಹಣೆಗೆ ನೀಡಲಾಗಿತ್ತು.
ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈ ಗೊಂಡಿದ್ದು 2021-22ನೇ ಸಾಲಿಗೆ ಸ್ಥಗಿತಗೊಂಡಿದ್ದ ಸಂಸದರ ನಿಧಿಯಲ್ಲಿ 2 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಶ್ರೀ ಬಿ.ವೈ. ರಾಘವೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಶ್ಲಾಘಿಸಿದ್ದಾರೆ.
Advertisement. Scroll to continue reading.