ಕರಾವಳಿ

ಹೆಬ್ರಿ : ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ನೋಂದಾಯಿಸುವ ಕಾರ್ಯಕ್ರಮ

0

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ, ರಾಷ್ಟೀಯ ಸೇವಾ ಯೋಜನೆ ಹಾಗೂ ಮತದಾರರ ಸಾಕ್ಷರತಾ ಸಂಘ ವತಿಯಿಂದ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ನೋಂದಾಯಿಸುವ ಕಾರ್ಯಕ್ರಮ ಬುಧವಾರ ನಡೆಯಿತು.

ಚುನಾವಣಾ ತರಬೇತುದಾರ, ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರಿನ ಉಪನ್ಯಾಸಕ ಗೋಪಾಲಕೃಷ್ಣ ಗೋರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪಭುತ್ವದ ಯಶಸ್ಸು ಪ್ರಜ್ಞಾವಂತ ಮತದಾರರ ಕೈಯಲ್ಲಿದೆ ಆದ್ದರಿಂದ ಸಮರ್ಥ ಭಾರತ, ಭಾರತಕ್ಕಾಗಿ ಸಮರ್ಥ ನಾಯಕನನ್ನು ಆರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

Advertisement. Scroll to continue reading.

ಹೆಬ್ರಿ ತಹಶೀಲ್ದಾರ್ ಪುರಂದರ.ಕೆ ಮಾತನಾಡಿ, ಮತದಾನ ನಾವು ಪಡೆದಿರುವ ಹಕ್ಕು ಯುವ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯದೇ ಚಾಚುತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿ, ಸಾಣೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಜಾನ್ ಆನ್ಲೈನ್ ನೋಂದಾವಣಿ ಬಗ್ಗೆ ಮಾರ್ಗದರ್ಶನ ನೀಡುವುದರ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ಮತದಾರ ಪಟ್ಟಿಗೆ ನೋಂದಣಿ ಮಾಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಪ್ರಸಾದ್ ರಾವ್.ಎಂ ವಹಿಸಿದ್ದರು.
ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ಹಾಗು ಮತದಾರರ ಸಾಕ್ಷರತಾ ಸಂಘದ ಸಂಚಾಲಕ ಬಾಲರಾಜ್ ಡಿ. ಬಿ, ಭೂತ್ ಲೆವೆಲ್ ಆಫೀಸರ್ ಕುಸುಮ, ಪ್ರಸಾದ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕ್ಷಮ ನಿರೂಪಿಸಿ, ಮಾಲತಿ ಸ್ವಾಗತಿಸಿ, ಚೈತ್ರ ವಂದಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com