ವರದಿ :ದಿನೇಶ್ ರಾಯಪ್ಪನಮಠ
ಉಡುಪಿ: ಗೃಹ ರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ಕ್ರೀಡಾ ಕೂಟವು ಡಿ. 1 ರಿಂದ ಡಿ.3 ರವರೆಗೆ ನಗರದ ಚಂದು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಮಾಡೆಂಟ್ ಡಾ| ಪ್ರಶಾಂತ್ ಶೆಟ್ಟಿ ತಿಳಿಸಿದರು
ಸೋಮವಾರ ಗೃಹರಕ್ಷಕ ದಳದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು
Advertisement. Scroll to continue reading.
ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ವಿಜೇತರಾದ ದ.ಕ, ಉಡುಪಿ, ಉತ್ತರ ಕನ್ನಡ ಹಾಗು ಚಿಕ್ಕಮಗಳೂರು ಜಿಲ್ಲೆಯ 140 ಗೃಹ ರಕ್ಷಕ/ರಕ್ಷಕಿಯರು ಭಾಗವಹಿಸಲಿದ್ದಾರೆ.
ಡಿ.1 ರ ಸಂಜೆ 4.30 ಕ್ಕೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಕ್ರೀಡಾ ಕೂಟವನ್ನು ಉದ್ಘಾಟಿಸಲಿದ್ದಾರೆ. ಮಣಿಪಾಲ ಕೆ.ಎಂ.ಸಿಯ ಡೀನ್ ಡಾ| ಶರತ್ ಕೆ ರಾವ್, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರ್ ಚಂದ್ರ, ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ನ ಅಧ್ಯಕ್ಷ ಗೋಪಾಲ ಭಟ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಡಿ. 3 ರ ಸಮಾರೋಪಕ್ಕೆ ಆರಕ್ಷಕ ಉಪ ಮಹಾ ನಿರೀಕ್ಷಕರು ಹಾಗು ಗೃಹರಕ್ಷಕದಳದ ಅಪರ ಮಹಾದೇಷ್ಠರು ಕೆ.ಟಿ. ಬಾಲಕೃಷ್ಣ, ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಟೆನ್ನಿಸ್ ಬಾಲ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ, ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಅಕ್ಷತಾ ಪೂಜಾರಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಮತ್ತು ದ.ಕ ಜಿಲ್ಲೆಯ ಡೆಪ್ಯೂಟಿ ಕಮಾಡೆಂಟ್ ರಮೇಶ್, ಕಚೇರಿ ಅಧೀಕ್ಷರಾದ ಕವಿತಾ, ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಉಪಸ್ಥಿತರಿದ್ದರು.
Advertisement. Scroll to continue reading.