ಕರಾವಳಿ

ಕೋಟ: ಶ್ರೀಕಲ್ಲಟ್ಟು ಮಹಾಲಿಂಗೇಶ್ವರ ದೇವಳದ ದೀಪೋತ್ಸವ ಸಂಪನ್ನ

0

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನ ಹರ್ತಟ್ಟು ಕೋಟ ಇದರ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಭಾನುವಾರ ಸಂಪನ್ನಗೊಂಡಿತು.
ದೇವಳದ ಒಳ ಸುತ್ತ ಪ್ರಾಂಗಣದಲ್ಲಿ ಭಕ್ತಾಧಿಗಳು ಹಣತೆ ದೀಪ ಹಚ್ಚುವ ಮೂಲಕ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ದೇವಳದ ಅರ್ಚಕ ಪ್ರತಿನಿಧಿ ಸುಧೀಂದ್ರ ಐತಾಳ್ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು. ಪೂಜಾ ಕೈಂಕರ್ಯದ ನಂತರ ಭಕ್ತಾಧಿಗಳಿಗೆ ಫಲಹಾರದ ವ್ಯವಸ್ಥೆ ಕಲ್ಪಿಸಲಾಯಿತು.
ವಿಶೇಷವಾಗಿ ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಅಲ್ಲದೆ ದೇವಳದ ವತಿಯಿಂದ ಭಜನಾ ತಂಡಕ್ಕೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು.

Advertisement. Scroll to continue reading.


ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಕಾರ್ಯದರ್ಶಿ ಹರೀಷ್ ದೇವಾಡಿಗ, ಸಮಿತಿಯ ಪ್ರಮುಖರಾದ ನಾಗರಾಜ್ ಗಾಣಿಗ, ಪ್ರಶಾಂತ್ ದೇವಾಡಿಗ, ಪ್ರದೀಪ್ ದೇವಾಡಿಗ, ಸಿದ್ಧ ದೇವಾಡಿಗ, ಭಜನಾ ತಂಡದ ವನಿತಾ ಉಪಾಧ್ಯ ಮತ್ತಿತರರು ಉಪಸ್ಥಿತರಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com