ಕರಾವಳಿ

ಕೋಟ : ಜೀವನ್‍ಮಿತ್ರ ತಂಡದಿಂದ ಕ್ಯಾನ್ಸರ್ ಪೀಡಿತ ವಂಶಿತ್‍ಗೆ ದೀಪೋತ್ಸವದಲ್ಲಿ ಸಂಗ್ರಹವಾದ ಸಹಾಯಧನ ಹಸ್ತಾಂತರ

1

ವರದಿ : ದಿನೇಶ್ ರಾಯಪ್ಪನಮಠ

ಕೋಟ: ನಾವುಂದ ಪರಿಸರದ ಕಾನ್ಸರ್ ಪೀಡಿತ 6 ವರ್ಷದ ವಂಶಿತ್ ಪುಟ್ಟ ಬಾಲಕನ ನೆರವಿಗೆ ಕೋಟದ ಜೀವನ್ ಮಿತ್ರ ಬಳಗ ಕುಂದಾಪುರದ ಕುಂದೇಶ್ವರ ದೀಪೋತ್ಸವದಲ್ಲಿ ನೆರವು ಯಾಚಿಸಿ ಅದರಿಂದ ಕ್ರೋಢಿಕರಿಸಿದ 67,762 ರೂ. ಗಳನ್ನು ಆ ಪುಟ್ಟ ಬಾಲಕನ ಕುಟುಂಬಕ್ಕೆ ಶನಿವಾರ ಹಸ್ತಾಂತರಿಸಲಾಯಿತು.

ಕೋಟದ ಅಮೃತೇಶ್ವರಿ ದೇವಳದಲ್ಲಿ ಅರ್ಚಕರ ಸಮ್ಮುಖದಲ್ಲಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗರ ಮೂಲಕ ವಂಶಿತ್ ಕುಟುಂಬಕ್ಕೆ ಹಸ್ತಾಂತರಿಸಿತು.

Advertisement. Scroll to continue reading.

ದೀಪೋತ್ಸವ ರಾತ್ರಿ ಇಡೀ ನೆರವು ಯಾಚನೆ
ಶನಿವಾರ ಕುಂದಾಪುರದ ಕುಂದೇಶ್ಚರ ದೇವರ ದೀಪೋತ್ಸವದ ಅಂಗವಾಗಿ ಸಾಕಷ್ಟು ಭಕ್ತಾಧಿಗಳು ನೆರೆದಿದ್ದರು ಒಂದು ರೀತಿಯಲ್ಲಿ ಹಬ್ಬದ ವಾತಾವರಣದ ನಡುವೆ ಸಹಾಯಹಸ್ತದ ಪಟ್ಟಿಗೆ ಹಿಡಿದ ಜೀವನ್ ಮಿತ್ರ ತಂಡ ಗಲ್ಲಿ ಗಲ್ಲಿಗಳಲ್ಲಿ ನಡು ರಾತ್ರಿ ಎನ್ನದೆ ಸಂಚರಿಸಿ ಸಾಕಷ್ಟು ಹಣ ಕ್ರೋಢೀಕರಿಸಿ ಕುಟುಂಬಕ್ಕೆ ಹಸ್ತಾಂತರಿಸಿದ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.


ಈ ಸಂದರ್ಭದಲ್ಲಿ ಜೀವನ್ ಮಿತ್ರ ಸೇವಾ ಟ್ರಸ್ಟ್‌ನ ನಾಗರಾಜ್ ಪುತ್ರನ್,ನಾಗೇಂದ್ರ ಪುತ್ರನ್, ದಿನೇಶ್ ಪುತ್ರನ್, ಯೋಗೇಂದ್ರ ಪುತ್ರನ್, ಭರತ್ ಗಾಣಿಗ ಕೋಟತಟ್ಟು, ಭಾಸ್ಕರ್ ದೇವಾಡಿಗ ಕೋಟತಟ್ಟು, ಶಶಿಧರ ಪುತ್ರನ್ ಪಡುಕರೆ, ಶೇಖರ್ ಪೂಜಾರಿ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

You May Also Like

ಕರಾವಳಿ

2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com