ಕರಾವಳಿ

ಕಾಪು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫಾರೂಕ್ ಚಂದ್ರನಗರ ಮುಡಿಗೆ ಮತ್ತೊಂದು ಕಿರೀಟ

0

ಕಾಪು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಮುಹಮ್ಮದ್ ಫಾರೂಕ್ ಚಂದ್ರ ನಗರ ಇವರು ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗಳಿಸುವ ಮೂಲಕ ಅವರ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸಿಕ್ಕಂತಾಗಿದೆ.

ವಿಶಾಲ ಮನೋಭಾವನೆಯಿಂದ ಸದಾ ಬಡಜನರ ಸೇವೆಗೈಯ್ಯುತ್ತಾ ಯಶಸ್ಸು ಹಾಗೂ ಜನಮನ್ನಣೆ ಗಳಿಸಿರುವ ಇವರನ್ನು ಗುರುತಿಸಿದ ಉಡುಪಿ ಜಿಲ್ಲಾಡಳಿತ 2021ರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದೇ ಶುಭ ಸಂದರ್ಭದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ(ರಿ) ಕಾಸರಗೋಡು ಆಯೋಜಿಸಿದ ‘ಗಡಿನಾಡ ಕನ್ನಡ ರಾಜ್ಯೋತ್ಸವ’ ಸಂದರ್ಭದಲ್ಲಿ ಕಾಸರಗೋಡಿನ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ , ಎಡನೀರು ಮಠಾಧಿಪತಿ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹಾಗು ಹಲವಾರು ಗಣ್ಯರ ಉಪಸ್ಥಿತಿಯಲ್ಲಿ “ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ” ಪ್ರದಾನ ಮಾಡಲಾಯಿತು.

ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸುಂದರ ಸಮಾಜ ನಿರ್ಮಾಣದ ಕನಸನ್ನು ಹೊತ್ತುಕೊಂಡ ಫಾರೂಕ್ ಚಂದ್ರನಗರ ಇವರನ್ನು ಈಗಾಗಲೇ ಸುಮಾರು ಮೂವತ್ತಕ್ಕೂ ಅಧಿಕ ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸುವ ಮೂಲಕ ಇವರನ್ನು ಪ್ರೋತ್ಸಾಹಿಸಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com