ಬೆಂಗಳೂರು : ಸೋಮವಾರದಿಂದ ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಕಾಂಗ್ರೆಸ್ ಪಕ್ಷದ ಶಾಸಕರುಗಳಿಗೆ ವಿಪ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತ ಅಜಯ್ ಸಿಂಗ್ ಅವರು ವಿಪ್ ಜಾರಿ ಮಾಡಿದ್ದಾರೆ. ಸೋಮವಾರದಿಂದ ಐದು ದಿನ ಸದನದಲ್ಲಿ ಹಾಜರಿರುವಂತೆ ಅವರು ಸೂಚನೆ ನೀಡಿದ್ದಾರೆ.
ಸದನದಲ್ಲಿ ಮತಾಂತರ ನಿಷೇಧ ಮಂಡನೆ ಸಾಧ್ಯತೆ ಹಿನ್ನೆಲೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಕಾಂಗ್ರೆಸ್ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.