ರಾಜ್ಯ

ಹೊಸ ವರ್ಷಾಚರಣೆಗೆ ಟಫ್ ರೂಲ್ಸ್; ಬಹಿರಂಗ ಆಚರಣೆಗೆ ಅವಕಾಶವಿಲ್ಲ

2

ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣದೊಂದಿಗೆ ಆಚರಣೆ ಮಾಡೋದಕ್ಕೆ ಅವಕಾಶ ನೀಡಲಾಗುತ್ತದೆ. ಬಹಿರಂಗವಾಗಿ ಹೊಸ ವರ್ಷ ಆಚರಣೆಗೆ ಅವಕಾಶ ಇಲ್ಲ ಹಾಗೂ ರಾಜ್ಯಾದ್ಯಂತ ಬಾರ್, ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ.

ಬಾರ್, ಪಬ್ ಗಳಲ್ಲಿ ಶೇ.50ರ ಮಿತಿಯನ್ನು ಜಾರಿಗೊಳಿಸಲಾಗಿದೆ. ಡಿಸೆಂಬರ್ 30 ರಿಂದ ಜನವರಿ 2 ರ ವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ ಕ್ರಿಸ್ಮಸ್, ಹೊಸವರ್ಷಾಚರಣೆ ಕುರಿತಂತೆ ಕೋವಿಡ್ ತಾಂತ್ರಿಕ ಸಭೆ ನಡೆಯಿತು.

Advertisement. Scroll to continue reading.

ಬಳಿಕ ಮಾತನಾಡಿದಂತ ಅವರು, ಈಗಿನ ಪರಿಸ್ಥಿತಿ ಅನುಸರಿಸಿ ತಜ್ಞರ ಶಿಫಾರಸ್ಸಿನಂತೆ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಜನರು ಸೇರೋದಕ್ಕೆ ನಿರ್ಬಂಧಿಸಲಾಗಿದೆ. ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ. ಎರಡು ಡೋಸ್ ಲಸಿಕೆ ಕಡ್ಡಾಯ. ಶೇ.50ರಷ್ಟು ಜನರಿಗೆ ಮಾತ್ರವೇ ಅವಕಾಶ ನೀಡಲಾಗುತ್ತಿದೆ. ಅಪಾರ್ಮೆಂಟ್ ನಲ್ಲಿ ಕೂಡ ಪಾರ್ಟಿ ಮಾಡುವಂತಿಲ್ಲ. ಡಿಜೆಗೆ ಅವಕಾಶ ಇಲ್ಲ ಎಂದರು.

ಡಿಸೆಂಬರ್ 30ರಿಂದ ಜನವರಿ 2 ರವರೆಗೆ ರಾಜ್ಯದಲ್ಲಿ ಹೊಸ ವರ್ಷಾಚರಣೆಯ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದೆ. ಚರ್ಚ್ ಗಳಲ್ಲಿ ಕ್ರಿಸ್ಮಸ್ ಆಚರಿಸಲು ಅವಕಾಶ. ಕ್ರಿಸ್ ಮಸ್ ಸಂದರ್ಭದಲ್ಲಿ ಕೊರೋನಾ ಮುಂಜಾಗ್ರತಾ ಕ್ರಮದೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಿಸಬೇಕು. ಗುಂಪು ಸೇರಿ ಹಾಗೂ ಹೊರಗಡೆ ಆಚರಣೆಗೆ ಅವಕಾಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com