ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದ್ದು, ಮಾಧ್ಯಮಗಳನ್ನು ಒಳ ಹೋಗದಂತೆ ತಡೆಯಲಾಗಿದೆ.
ಇಂದು ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಸುವರ್ಣಸೌಧದ ಒಳಗೆ ಬಿಡದಂತೆ ಸ್ಪೀಕರ್ ಕಾಗೇರಿ ಸೂಚನೆ ನೀಡಿದ್ದಾರೆ. ಯಾವುದೇ ಗೇಟ್ ಗಳಿಂದಲೂ ಮಾಧ್ಯಮ ಪ್ರತಿನಿಧಿಗಳನ್ನು ಬಿಡದಂತೆ ಮಾರ್ಷೆಲ್ ಗಳಿಗೆ ಸ್ಪೀಕರ್ ಕಾಗೇರಿ ಅವರು ಸೂಚನೆ ನೀಡಿದ್ದಾರೆ.
ಹೀಗಾಗಿ ಮಾಧ್ಯಮ ಪ್ರತಿನಿಧಿಗಳು ಸುವರ್ಣ ಸೌಧದ ಮೆಟ್ಟಿಲ ಮೇಲೆ ಕುಳಿತು, ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕುತ್ತಿದ್ದಾರೆ.
Advertisement. Scroll to continue reading.