ಸಿನಿಮಾ

ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೆ.ಎಸ್.ಸೇತುಮಾಧವನ್ ಇನ್ನಿಲ್ಲ

1

ಚೆನ್ನೈ: ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೆ.ಎಸ್.ಸೇತುಮಾಧವನ್ ಇಂದು ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.

ಕೇರಳದ ಉತ್ತರ ಪಾಲಕ್ಕಾಡ್ ಜಿಲ್ಲೆಯಲ್ಲಿ ಜನಿಸಿದ ಅವರು ಕೆ. ರಾಮನಾಥ್ ಅವರಿಗೆ ಸಹಾಯಕ ನಿರ್ದೇಶಕರಾಗಿ ಮಲಯಾಳಂ ಚಿತ್ರರಂಗಕ್ಕೆ ಪ್ರವೇಶಿಸಿದರು. 1960ರಲ್ಲಿ ಸಿಂಹಳೀಸ್ ಚಲನಚಿತ್ರ ‘ವೀರವಿಜಯ’ ಮೂಲಕ ಸ್ವತಂತ್ರ ಚಲನಚಿತ್ರ ನಿರ್ಮಾಪಕರಾದರು.

ಅವರು ನಿರ್ದೇಶಿಸಿದ ಮೊದಲ ಮಲಯಾಳಂ ಚಿತ್ರ ಜ್ಞಾನ ಸುಂದರಿ. ಅವರು ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ವಿವಿಧ ಭಾಷೆಗಳಲ್ಲಿ 60ಕ್ಕೂ ಹೆಚ್ಚು ಚಲನಚಿತ್ರಗಳನ್ನು ನೀಡಿದ್ದಾರೆ.

Advertisement. Scroll to continue reading.

‘ಒಡಯಿಲ್ ನಿನ್ನು’, ‘ಅನುಭಾವಂಗಲ್ ಪಾಲಿಚಕಲ್’, ‘ಒಪ್ಪೋಲ್’, ‘ಅರನಜಿಕನೇರಂ’, ‘ಅಚಾನಕ್ ಬಪ್ಪಯುಮ್’, ಮತ್ತು ‘ಪಾಣಿತೀರ್ಥ ವೀಡು’ ಮೊದಲಾದ ಅತ್ಯುತ್ತಮ ಚಿತ್ರಗಳನ್ನು ನೀಡಿದ್ದಾರೆ.

10 ರಾಷ್ಟ್ರೀಯ ಪ್ರಶಸ್ತಿಗಳು ಮತ್ತು ಹಲವಾರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದ ಕೆ.ಎಸ್. ಸೇತುಮಾಧವನ್ ಅವರು 2009 ರಲ್ಲಿ ಕೇರಳ ಸರ್ಕಾರ ಸ್ಥಾಪಿಸಿದ ಚಲನಚಿತ್ರ ಕ್ಷೇತ್ರದ ಅತ್ಯುನ್ನತ ಗೌರವವಾದ ಪ್ರತಿಷ್ಠಿತ ಜೆ.ಸಿ. ಡೇನಿಯಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು.

ಕಮಲ್ ಹಾಸನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಸೇತುಮಾಧವನ್ ಅವರಿಗೆ ಸಲ್ಲುತ್ತದೆ. ‘ಕರುಂ ಕರಲುಮ್’ ಚಲನಚಿತ್ರದ ಮೂಲಕ ಮಲಯಾಳಂನಲ್ಲಿ ಬಾಲನಟನಾಗಿ ಮತ್ತು ತಮ್ಮ ‘ಕನ್ಯಾಕುಮಾರಿ’ ಚಿತ್ರದ ಮೂಲಕ ಮುಖ್ಯ ಪಾತ್ರದಲ್ಲಿ ಉಳಗನಾಯಗನ್ ಕಮಲ್ ಹಾಸನ್ ಅವರನ್ನು ಪರಿಚಯಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com