ಕರಾವಳಿ

ಉಡುಪಿ : ಜನವರಿ 3 ರಂದು ಉದ್ಯೋಗ ಮೇಳ- 2022

4

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ಸಂಜೀವಿನಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಪ್ರಯುಕ್ತ ಜನವರಿ 3 ರಂದು ಪೂರ್ವಾಹ್ನ 10 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ಜಿಲ್ಲಾಧಿಕಾರಿಗಳ ಕಚೇರಿ ರಜತಾದ್ರಿ ಮಣಿಪಾಲದಲ್ಲಿ ಉದ್ಯೋಗ ಮೇಳ- 2022 ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಹಾಗೂ ತರಬೇತಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಜಿಲ್ಲೆಯ ನಿರುದ್ಯೋಗ ಯುವಕ – ಯುವತಿಯರು ಬಯೋಡಾಟ ಹಾಗೂ ಸಂಬಂಧಿಸಿದ ವಿದ್ಯಾರ್ಹತೆ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

Advertisement. Scroll to continue reading.


8 ನೇ ತರಗತಿ ಮತ್ತು ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು udupi.nic.in
ವೆಬ್ ಸೈಟ್ ಭೇಟಿ ನೀಡಿ ಸಂಜೀವಿನಿ ಉದ್ಯೋಗ ಮೇಳ -2022 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ
ಪ್ರಭಾಕರ್ ಆಚಾರ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು 9740993555,
ಅವಿನಾಶ್ ಜಿಲ್ಲಾ ವ್ಯವಸ್ಥಾಪಕರು 9844234080
ನವ್ಯ ಜಿಲ್ಲಾ ವ್ಯವಸ್ಥಾಪಕಿ
9686123850
ಇವರನ್ನು ಸಂಪರ್ಕಿಸಬಹುದಾಗಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com