ಕೇರಳ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಜೆಪಿ ನಾಯಕ ಕೆ. ಅಯ್ಯಪ್ಪನ್ ಪಿಳ್ಳೈ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 107 ವರ್ಷ ವಯಸ್ಸಾಗಿತ್ತು.
ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅಯ್ಯಪ್ಪನ್ ಪಿಳ್ಳೆ ತಿರುವಾಂಕೂರಿನ ಶ್ರೀಮೂಲಂ ಪ್ರಜಾ ಸಭೆಯ ಸದಸ್ಯರು ಹಾಗೂ ಹಿರಿಯ ವಕೀಲ ಆಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಮಹಾತ್ಮ ಗಾಂಧಿಯವರನ್ನು ಭೇಟಿಯಾಗಿದ್ದರು.
Advertisement. Scroll to continue reading.
ಕೆ. ಅಯ್ಯಪ್ಪನ್ ಪಿಳ್ಳೈ ಅವರ ನಿಧನಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.