ಬೆಂಗಳೂರು: ನಾಳೆ ರಾತ್ರಿಯಿಂದ ರಾಜ್ಯದಲ್ಲಿ ವಾರಾಂತ್ಯ ಕರ್ಪ್ಯೂ ಜಾರಿಯಾಗಲಿದೆ. ಹೀಗಾಗಿ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಬಾರ್ ಗಳು ಕ್ಲೋಸ್ ಎಂಬುದಾಗಿ ಅಬಕಾರಿ ಇಲಾಖೆ ತಿಳಿಸಿದೆ.
ಅಬಕಾರಿ ಇಲಾಖೆಯ ಅಪರ ಆಯುಕ್ತ ರಾಜೇಂದ್ರ ಮಾಹಿತಿ ನೀಡಿದ್ದಾರೆ. ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಬಾರ್ ಗಳು ಸಂಪೂರ್ಣವಾಗಿ ಕ್ಲೋಸ್ ಇರಲಿವೆ. ಯಾವುದೇ ಬಾರ್ ಗಳು ತೆರೆದಿರುವುದಿಲ್ಲ. ಮದ್ಯ ಪಾರ್ಸಲ್ ಗೂ ಅವಕಾಶ ಇರುವುದಿಲ್ಲ ಎಂದಿದ್ದಾರೆ.
ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಜೊತೆಗೆ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ತುರ್ತು ಸಂದರ್ಭದಲ್ಲಿ ಹೊರತಾಗಿ ಯಾರಿಗೂ ಅವಕಾಶ ಇರುವುದಿಲ್ಲ.
Advertisement. Scroll to continue reading.