ರಾಜ್ಯ

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನ; ಮಕರ ಸಂಕ್ರಮಣ ಜಾತ್ರೆ ರದ್ದು

2

ಶಿವಮೊಗ್ಗ : ಪ್ರತಿವರ್ಷದಂತೆ ಈ ವರ್ಷವೂ ಸಾಗರ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಸಿಗಂದೂರು ಚೌಡೇಶ್ವರಿ ತಾಯಿ ಸನ್ನಿಧಿಯಲ್ಲಿ ಮಕರ ಸಂಕ್ರಮಣ ಜಾತ್ರೆಯನ್ನು ನಿಗದಿಪಡಿಸಲಾಗಿತ್ತು. ಆದರೆ, ಈ ಬಾರಿಯೂ ಕೊರೋನಾ ಕಾರಣದಿಂದಾಗಿ ಸಂಕ್ರಮಣ ಜಾತ್ರಾ ಮಹೋತ್ಸವವನ್ನು ರದ್ದು ಪಡಿಸಲಾಗಿದೆ.

ಈ ಬಗ್ಗೆ ಸಿಗಂಧೂರು ದೇವಸ್ಥಾನ ಸಮಿತಿಯ ಕಾರ್ಯದರ್ಶಿ ರವಿಕುಮಾರ್ ಅವರು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ ಕೊರೋನಾ ಕಾರಣದಿಂದಾಗಿ ಜನವರಿ 31ರವರೆಗೆ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹೀಗಾಗಿ ಎರಡು ದಿನದ ಬದಲಾಗಿ, ಜನವರಿ 14ರಂದು ಸರಳವಾಗಿ ಮಕರ ಸಂಕ್ರಮಣ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 14ರಂದು ಒಂದೇ ದಿನ ಮಾತ್ರವೇ ಜಾತ್ರೆಯ ಎಲ್ಲಾ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಚೌಡೇಶ್ವರಿ ದೇವಿಯ ದರ್ಶನಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ. ಜಾತ್ರೆಯ ಯಾವುದೇ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಭಾಗಿಯಾಗಲು ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.

Advertisement. Scroll to continue reading.

ಜನವರಿ 14 ರಂದು ಬೆಳಿಗ್ಗೆ 7 ರಿಂದ ರಾತ್ರಿ 7ರ ವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವಿಶೇಷ ಪೂಜೆ, ಸೇವೆಗಳಿಗೆ ಭಕ್ತರಿಗೆ ಅವಕಾಶ ಇಲ್ಲ. ವೇದಿಕೆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ದೇವರ ದರ್ಶನಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com