ಬ್ರಹ್ಮಾವರ : ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಹಾಗೂ 24 ವರ್ಷಗಳಿಂದ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ವರ್ಗಾವಣೆಗೊಂಡ ಶ್ರೀಕಾಂತ ಹೆಗಡೆ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀನಿವಾಸ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ, ಮಹಾಬಲ ಕುಂದರ್, ದಿನೇಶ್, ಕೃಷ್ಣ ಮಾಸ್ಟರ್, ಸುರೇಶ ಖಾರ್ವಿ, ವಿಠ್ಠಲ ಕೋಟ್ಯಾನ್, ಹಮೀದ್, ವಿಜಯಲಕ್ಷ್ಮಿ, ಬೇಬಿ ಮೊದಲಾದವರು ಉಪಸ್ಥಿತರಿದ್ದರು.