ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ವಿದ್ಯಾರ್ಥಿ ಸಂಘ ಎಸ್. ಎಂ. ಎಸ್. ಕಾಲೇಜು, ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ಎಸ್. ಎಂ. ಎಸ್ ಕಾಲೇಜು ಸಭಾಂಗಣದಲ್ಲಿ ಜರುಗಿತು.
ಸಂಪನ್ಮೂಲ ವ್ಯಕ್ತಿಯಾಗಿ ತಜ್ಞ ವೈದ್ಯರು, ಖ್ಯಾತ ಮಾನಸಿಕ ತಜ್ಞ ಡಾ. ಪಿ. ವಿ. ಭಂಡಾರಿ ಆಗಮಿಸಿದ್ದರು.
Advertisement. Scroll to continue reading.
ಮಾದಕ ವ್ಯಸನ ಎಂದರೇನು? ಅದರ ದುಷ್ಪರಿಣಾಮಗಳು ಮಾನಸಿಕ ಸಮಸ್ಯೆಗಳು? ದೈಹಿಕ ಕಾಯಿಲೆಗಳು ಬಗ್ಗೆ ಸವಿಸ್ತಾರವಾಗಿ ವಿವರಿಸಿ ವಿದ್ಯಾರ್ಥಿಗಳು ಮಾದಕ ವ್ಯಸನ ಗಳಿಂದ ದೂರ ಇರುವ ಹಾಗೂ ಇತರರಿಗೂ ಇದನ್ನೂ ತ್ಯಜಿಸುವಂತೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭ ರೋಟರಿ ಅಧ್ಯಕ್ಷ ರೊ. ಹರೀಶ್ ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಂಶುಪಾಲರಾದ ಪ್ರಸನ್ನ ಶೆಟ್ಟಿ, ಅಸಿಸ್ಟೆಂಟ್ ಗವರ್ನರ್ ಪದ್ಮನಾಭ ಕಾಂಚನ್, ವಿದ್ಯಾರ್ಥಿ ಸಂಘದ ಸಂಚಾಲಕ ರೋಬರ್ಟ್ ರೋಡ್ರಿಗಸ್, ರೋಟರಿ ಕಾರ್ಯದರ್ಶಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರೋಟರಿ ವತಿಯಿಂದ 5 ದೊಡ್ಡ ಕಸದ ಬುಟ್ಟಿಗಳನ್ನು ಕೊಡುಗೆಯಾಗಿ ನೀಡಲಾಯಿತು.
ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಪ್ರಾಂಶುಪಾಲ ಪ್ರಸನ್ನ ಶೆಟ್ಟಿ ಸ್ವಾಗತಿಸಿ, ವಂದಿಸಿದರು