ಕರಾವಳಿ

ಕುಂದಾಪುರ: ಫೆ. 08 ರಿಂದ 10 ಶ್ರೀಬಗಳಾಂಬ ತಾಯಿ ಪ್ರತಿಷ್ಠಾ ವರ್ಧಂತಿ

1

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಫೆಬ್ರವರಿ 08 ರಿಂದ ಫೆ. 10 ರವರೆಗೆ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ.


ಫೆ. 08 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಯಾಗ, ಸಪರಿವಾರ ದೇವರಾದ ಶ್ರೀಕಾಲಭೈರವೇಶ್ವರ, ಆಂಜನೇಯ, ನಾಗ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ 3 ರಿಂದ ಕುಂದಾಪುರ ತಾಲೂಕು ಭಗವದ್ಗೀತಾ ಅಭಿಯಾನ ಸಮಿತಿಯಿಂದ ಸಂಪೂರ್ಣ ಭಗವದ್ಗೀತಾ ಪಠಣ, ಸಂಜೆ ಭಜನೆ, ಫೆಬ್ರವರಿ 09 ರಂದು ಗುರು ಸನ್ನಿಧಿಯಲ್ಲಿ ಕಲಾಭಿವೃದ್ಧಿ ಹೋಮ, ನವಕ ಪ್ರಧಾನ, ಕಲಶಾಭಿಷೇಕ, ಸತ್ಯನಾರಾಯಣ ಪೂಜೆ, ಮಹಾಪೂಜೆ, ಸಂಜೆ ವಾಸ್ತುಪೂಜೆ, ಬ್ರಹ್ಮಕಲಶ ಸ್ಥಾಪನೆ,

Advertisement. Scroll to continue reading.

ಫೆ. 10 ರಂದು ಬೆಳಿಗ್ಗೆ ಬ್ರಹ್ಮ ಕಲಶಾಭಿಷೇಕ, ಚಂಡಿಯಾಗ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಹೂವಿನ ಪೂಜೆ, ರಂಗ ಪೂಜೆ ನೆರವೇರಲಿದೆ. ರಾತ್ರಿ 9 ರಿಂದ ಹನುಮಗಿರಿ ಮೇಳದವರಿಂದ ‘ತ್ರಿಪುರ ಮಥನ’ ಯಕ್ಷಗಾನ ನಡೆಯಲಿದೆ.

Click to comment

You May Also Like

ಕರಾವಳಿ

2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com