ಬೆಂಗಳೂರು: ಚಂದನವನದ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.
ಅವರು ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಆದರೆ ಮಧ್ಯರಾತ್ರಿ 12.30ಕ್ಕೆ ವಿದ್ಯಾರಣ್ಯಪುರದಲ್ಲಿರುವ ಅವರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ.
Advertisement. Scroll to continue reading.
ಅಶೋಕ್ ರಾವ್ ಅನೇಕ ಚಲನಚಿತ್ರಗಳಲ್ಲಿ ಪಾತ್ರವಾಗಿದ್ದಾರೆ. ಡಾ. ರಾಜ್ ಕುಮಾರ್ ಅವರ ‘ಪರಶುರಾಮ್’ ಚಿತ್ರದಲ್ಲಿ ಖಳ ನಟನಾಗಿ ನಟಿಸಿದ್ದರು. ಅಶೋಕ್ ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.
ಖಳ ನಾಯಕನಾಗಿ, ಪೋಷಕ ಪಾತ್ರಧಾರಿಯಾಗಿ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
Advertisement. Scroll to continue reading.