ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ದಾರಿದೀಪದ ಅವ್ಯವಸ್ಥೆಯನ್ನು ಖಂಡಿಸಿ ಆರಂಭಿಸಿರುವ ಪ್ರತಿಭಟನೆಯ ಐದನೇ ದಿನವಾದ ಇಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಅವರ ನೇತೃತ್ವದಲ್ಲಿ ದೊಂದಿಗಳನ್ನು ಉರಿಸುವುದರೊಂದಿಗೆ ಕೈಯಲ್ಲಿ ಕರ್ಪೂರ ಹೊತ್ತಿಸಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಧಿಕ್ಕಾರ ಕೂಗಲಾಯಿತು.
ಪ್ರತಿಭಟನೆಯಲ್ಲಿ ಉಡುಪಿ ತಾಲೂಕು ಅಧ್ಯಕ್ಷರಾದ ಸುಧೀರ್ ಪೂಜಾರಿ, ಮತ್ತಾಕ್ ಅಲಿ, ರಿತೇಶ್, ಶಾಹಿಲ್ ರಹಮತುಲ್ಲಾ, ರಾಹುಲ್ ಪಿಂಟೋ, ಸುಹೇಲ್ ಉದ್ಯಾವರ, ಮನೋಜ್, ಧನಂಜಯ್ ಪುತ್ತೂರು ಮಂಜು ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ಕಾರ್ಯಕರ್ತರು ಉಪಸ್ಥಿತರಿದ್ದರು.
Advertisement. Scroll to continue reading.