ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಹಿಜಾಬ್ ಗಾಗಿ ಉಡುಪಿ ಕೆಲವು ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆಸಿತು. ವಾದ – ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿದೆ. ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಒಂದೂವರೆ ಗಂಟೆ ವಿಚಾರಣೆ ಬಳಿಕ ಇಂದು ಮಧ್ಯಾಹ್ನ ಮತ್ತೆ ವಿಚಾರಣೆ ನಡೆಯಲಿದೆ.
ನ್ಯಾ.ಕೃಷ್ಣ ದೀಕ್ಷಿತ್ ಪೀಠದಲ್ಲಿ ಉಡುಪಿ ಮೂಲದ ರೇಷ್ಮಾ, ಮುಬಾರಕ್ ಸೇರಿದಂತೆ ಹಲವರು ಸಲ್ಲಿಸಿದ್ದಂತ ಅರ್ಜಿ ವಿಚಾರಣೆ ನಡೆದಿದೆ.
Advertisement. Scroll to continue reading.