ಶಿವಮೊಗ್ಗ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಟನೆ ತಾರಕಕ್ಕೇರಿದೆ. ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಅಲ್ಲದೇ, ಕಾಲೇಜಿನ ಧ್ವಜ ಸ್ತಂಭವನ್ನು ಹತ್ತಿ ಕೇಸರಿ ಧ್ವಜವನ್ನು ಹಾರಿಸಿದ್ದರು.
ಕಾಲೇಜಿನಲ್ಲಿ ಕಲ್ಲು ತೂರಾಟ, ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇಂದು ಮತ್ತು ನಾಳೆ ಸೇರಿ 2 ದಿನ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
Advertisement. Scroll to continue reading.
ಶಿವಮೊಗ್ಗ ಸರ್ಕಾರಿ ಶಾಲೆಯಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ತಾರಕಕ್ಕೇರಿತ್ತು. ಈ ವೇಳೆ ಪೊಲೀಸರು ನಡುವೆ ವಾಗ್ವಾದ ನಡೆಸಿದ್ದರು. ಅಲ್ಲದೇ ಕಾಲೇಜಿನ ಆವರಣದಲ್ಲಿದ್ದಂತಹ ಧ್ವಜದ ಕಂಬವೇರಿ ಕೇಸರಿ ಧ್ವಜವನ್ನು ಹಾರಿಸಿದ್ದರು.
ಈ ಬಳಿಕ ಲಾಠಿ ಚಾರ್ಜ್ ಕೂಡ ಮಾಡಲಾಗಿತ್ತು. ಸ್ವತಃ ಡಿಸಿಗಳೇ ಕಾಲೇಜಿಗೆ ಆಗಮಿಸಿ, ಮೊಕ್ಕಾಂ ಹೂಡಿ, ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ಈ ನಡುವೆಯೂ ಪೊಲೀಸರ ಮೇಲೆ ಕಲ್ಲು ತೂರಾಟ, ಕಾಲೇಜು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ನಾಗರಾಜ್ ಅವರು ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ದಿನಾಂಕ ಇಂದು ಮತ್ತು ದಿನಾಂಕ ನಾಳೆ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
Advertisement. Scroll to continue reading.