ನವದೆಹಲಿ : ಸದ್ಯ ಹಿಜಾಬ್ ವಿವಾದವು ನ್ಯಾಯಾಪೀಠದ ಮುಂದೆ ಇದ್ದು, ನ್ಯಾಯಾಲಯದ ತೀರ್ಪು ಕಾಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಗಲಾಟೆಯಾಗಿರುವ ಪ್ರದೇಶದಲ್ಲಿ ರಜೆ ನೀಡುವಂತೆ ಸೂಚನೆ ನೀಡಿರುವೆ. ಇಂದು ಸಂಜೆ ಬೆಂಗಳೂರಿಗೆ ತೆರಳಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಹಿಜಾಬ್ ವಿವಾದಕ್ಕೆ ಬೇರೆ ಬಣ್ಣ ಕೊಡಬೇಡಿ. ವಿದ್ಯಾರ್ಥಿಗಳು ಶಾಂತಿ, ಸುವ್ಯವಸ್ಥೆ ಕಾಪಾಡಿ ಎಂದು ಮನವಿ ಮಾಡಿದ್ದಾರೆ. ಯಾರು ಕೂಡ ಪ್ರಚೋದನೆ ಮಾಡುವ ಕೆಲಸ ಮಾಡಬಾರದು, ಈಗಾಗಲೇ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ, ಹೈಕೋರ್ಟ್ನಿಂದ ಅಂತಿಮ ಆದೇಶ ಬರುವ ತನಕ ತಾಳ್ಮೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ.
Advertisement. Scroll to continue reading.