ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ದೇಶ ಕಟ್ಟಿದ ಐತಿಹಾಸಿಕ ಕಾಂಗ್ರೆಸ್ ಪಕ್ಷ, ಜನಸಾಮಾನ್ಯರ ಪಕ್ಷ, ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ಬದಲಾವಣೆಯ ಹರಿಕಾರರಾಗಿ, ಪಕ್ಷವನ್ನು ಉಳಿಸಿ ಬೆಳೆಸಿ, ಸದಸ್ಯತ್ವದ ಅಭಿಯಾನದ ಮಹಾನ್ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಹೇಳಿದರು.
ಅವರು ಹೆಬ್ರಿ ಚೈತನ್ಯ ಯುವ ವೃಂದದ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
Advertisement. Scroll to continue reading.
ಕಾಂಗ್ರೆಸ್ ಪಕ್ಷದ ಹೆಬ್ರಿ ಉಸ್ತುವಾರಿಗಳಾದ ಅಶ್ವಿನ್ ಕುಮಾರ್ ರೈ ಮತ್ತು ಸುರೇಂದ್ರ ಶೆಟ್ಟಿ ಕಾರ್ಕಳ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಸಮಗ್ರ ಮಾಹಿತಿ ನೀಡಿ, ಅತ್ಯಂತ ಯಶಸ್ವಿಯಾಗಿ ಪರಿಣಾಮವಾಗಿ ಸದಸ್ಯತ್ವವನ್ನು ನೋಂದಣಿ ಮಾಡಬೇಕಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸದಸ್ಯ ಸೀತಾನದಿ ರಮೇಶ ಹೆಗ್ಡೆ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆರ್ವಾಸೆ ಪ್ರಕಾಶ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ ಶೆಟ್ಟಿ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜನಿ ಹೆಬ್ಬಾರ್ ಕಬ್ಬಿನಾಲೆ, ಪಕ್ಷದ ವಿವಿಧ ಘಟಕಗಳ ಮುಖಂಡರು ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎಚ್. ಜನಾರ್ಧನ್ ವಂದಿಸಿದರು.
Advertisement. Scroll to continue reading.