ನವದೆಹಲಿ: ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದದ ಕುರಿತಂತೆ, ಈಗ ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಿಸಲು ನಕಾರ ವ್ಯಕ್ತ ಪಡಿಸಿದೆ.
ಈ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಖ್ಯಾತ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್. ವಿ. ರಮಣ ಅವರನ್ನೊಳಗೊಂಡ ನ್ಯಾಯಪೀಠ, ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆಯ ತೀರ್ಪು ಬರಲಿ. ಆ ಬಳಿಕ ನೋಡೋಣ. ಈ ಸದ್ಯಕ್ಕೆ ಮಧ್ಯೆ ಪ್ರವೇಶಿಸಲು ಆಗುವುದಿಲ್ಲ ಎಂದು ತಿಳಿಸಿದೆ.
ಇಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡಂತ ತ್ರಿ ಸದಸ್ಯ ನ್ಯಾಯಪೀಠದಲ್ಲಿ ಮಧ್ಯಾಹ್ನ 2.30ಕ್ಕೆ ಹಿಜಾಬ್ ಅನುಮತಿ ಕೋರಿದಂತ ಅರ್ಜಿಯ ವಿಚಾರಣೆ ನಡೆಯಲಿದೆ.
Advertisement. Scroll to continue reading.