ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಹಿಜಾಬ್ ಕೇಸರಿ ಶಾಲು ಪ್ರಕರಣದ ವಿಚಾರಣೆ ಇಂದು ಮತ್ತೆ ಹೈಕೋರ್ಟ್ ತ್ರೀ ಸದಸ್ಯ ಪೀಠದಲ್ಲಿ ನಡೆದಿದ್ದು, ನಾಳೆ ಮಧ್ಯಾಹ್ನ 2.30 ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ನ್ಯಾ.ಕೃಷ್ಣಾ ಎಸ್.ದೀಕ್ಷಿತ್, ಸಿಜೆ ರಿತುರಾಜ್ ಅವಸ್ತಿ, ನ್ಯಾ.ಖಾಜಿ ಜೈಬಿನ್ನೀಸಾ ಮೊಹಿಯುದ್ದೀನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಿಂದ ವಿಚಾರಣೆ ನಡೆಯಿತು.
ಸಾಮಾಜಿಕ ಕಾರ್ಯಕರ್ತ, ವಕೀಲ ರಹಮತ್ ಉಲ್ಲಾ ಸಲ್ಲಿಸಿದ್ದ ಪಿಐಎಲ್ ಅನ್ನು ನಿಯಮದಂತೆ ಅರ್ಜಿ ಸಲ್ಲಿಸದ ಕಾರಣ ಹೈಕೋರ್ಟ್ ಅರ್ಜಿ ವಜಾಗೊಳಿಸಿತು.
Advertisement. Scroll to continue reading.
ವಕೀಲ ಎ.ಎಂ. ಧರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸಿಜೆ, ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದರು
ಅಲ್ಪಸಂಖ್ಯಾತ ಮಂಡಳಿಯಿಂದ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಜಿ.ಆರ್. ಮೋಹನ್ ರಿಂದ ಅರ್ಜಿ ಸಲ್ಲಿಕೆಯಾಗಿದ್ದು, ನಾಳೆ ವಿಚಾರಣೆ ನಡೆಸೋಣ ಎಂದು ಪೀಠ ಹೇಳಿತು.
ಸುದೀರ್ಘ ವಿಚಾರಣೆಯ ಬಳಿಕ ನಾಳೆಗೆ ವಿಚಾರಣೆ ಮುಂದೂಡಲಾಗಿದೆ. ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಯಲಿದೆ.
Advertisement. Scroll to continue reading.