ಉಡುಪಿ : ರಥಬೀದಿ ಗೆಳೆಯರು ಸಾಂಸ್ಕೃತಿಕ ವೇದಿಕೆ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಎಂ.ಜಿ.ಎಂ.ಕಾಲೇಜು ಉಡುಪಿ, ಡಾ.ಎನ್. ಮುರಾರಿ ಬಲ್ಲಾಳ್ ಚಿಂತನ ಫೌಂಡೇಶನ್ ಅಂಬಲಪಾಡಿ ಸಹಕಾರದಲ್ಲಿ ಡಾ.ನಿ.ಮುರಾರಿ ಬಲ್ಲಾಳ್, ಪ್ರೊ.ಕೆ.ಎಸ್.ಕೆದ್ಲಾಯ ಸವಿನೆನಪಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮುರಾರಿ – ಕೆದ್ಲಾಯ ರಂಗೋತ್ಸವ ಎಂ.ಜಿ.ಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ಉದ್ಘಾಟನೆಗೊಂಡಿತು.
ರಂಗೋತ್ಸವವನ್ನು ಯುವರಂಗ ನಿರ್ದೇಶಕ ಲಕ್ಷ್ಮಣ ಕೆ.ಪಿ. ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ್, ಉಡುಪಿ ರಥಬೀದಿ ಗೆಳೆಯರು ಅಧ್ಯಕ್ಷ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ, ಕಾರ್ಯದರ್ಶಿ ಪ್ರೊ. ಸುಬ್ರಹ್ಮಣ್ಯ ಜೋಶಿ, ನಾಟಕ ವಿಭಾಗದ ಸಂಚಾಲಕರಾದ ಸಂತೋಷ್ ಶೆಟ್ಟಿ ಹಿರಿಯಡ್ಕ, ಸಂತೋಷ್ ನಾಯಕ್ ಪಟ್ಲ ಮೊದಲಾದವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಡಾ.ರಾಜಪ್ಪ ದಳವಾಯಿ ರಚಿತ, ಲಕ್ಷ್ಮಣ ಕೆ.ಪಿ. ನಿರ್ದೇಶನದಲ್ಲಿ, ಸಂಧ್ಯಾ ಅರಕೆರೆ ಸಹನಿರ್ದೇಶನದಲ್ಲಿ ರಂಗಾಯಣ – ಶಿವಮೊಗ್ಗ ಅಭಿನಯಿಸುವ ಕನ್ನಡ ನಾಟಕ ‘ವಿ ದ ಪೀಪಲ್ ಆಫ್ ಇಂಡಿಯಾ’ ಪ್ರದರ್ಶನ ನಡೆಯಿತು.