ಹೆಬ್ರಿ: ಹಿಂದೂ ಜಾಗರಣೆ ವೇದಿಕೆ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
Published
1
ವರದಿ: ಶ್ರೀದತ್ತ ಹೆಬ್ರಿ
ಹೆಬ್ರಿ : ಹಿಂದೂ ಜಾಗರಣ ವೇದಿಕೆ ಹೆಬ್ರಿ ತಾಲ್ಲೂಕು, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಉಡುಪಿ ಮತ್ತು ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಆಶ್ರಯದಲ್ಲಿ ಶನಿವಾರ ಹೆಬ್ರಿಯ ಶ್ರೀರಾಮಮಂದಿರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಉದ್ಯಮಿ ಬೆಳ್ವೆ ಗಣೇಶ್ ಕಿಣಿ ನೆರವೇರಿಸಿದರು. ಅತಿಥಿಗಳಾಗಿ ಹಿಂದೂ ಜಾಗರಣ ವೇದಿಕೆಯ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದ ವೈದ್ಯರು ವೇದಿಕೆಯಲ್ಲಿದ್ದರು.
ಹಿಂದೂ ಜಾಗರಣ ವೇದಿಕೆಯ ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರು, ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
ನೂರಾರು ಮಂದಿ ರಕ್ತದಾನ ಮಾಡಿದ್ದು, 125 ಯೂನಿಟ್ ರಕ್ತ ಸಂಗ್ರಹವಾಗಿದೆ.