ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಶಿರ್ಲಾಲು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಕಾರಣವಾಗಿದ್ದ ಕಡತವನ್ನು ಸದಸ್ಯರಾದ ಸುಜಿತ್ ಕುಮಾರ್ ಶೆಟ್ಟಿ, ಕಿಶೋರ್ ಮತ್ತು ಗಿರೀಶ್ ಇವರು ಕೈ ಚೀಲದಲ್ಲಿ ತುಂಬಿ ಹೊತ್ತೊಯ್ದಿದ್ದಾರೆ ಎಂದು ಆರೋಪಿಸಿ ಶಿರ್ಲಾಲು ಪಂಚಾಯತ್ ಪಿಡಿಒ ಶ್ರೀನಿವಾಸ್ ಅಜೆಕಾರು ಠಾಣೆಯಲ್ಲಿ 3 ಜನ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ ಇದು ಸತ್ಯಕ್ಕೆ ದೂರವಾಗಿದ್ದು. ರಾಜಕೀಯ ಷಡ್ಯಂತ್ರದಿಂದ ಈ ರೀತಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೂಜಾರಿ ಅವರು ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
3 ಜನ ಸದಸ್ಯರ ಮೇಲೆ ಆರೋಪ ಹೊರಿಸಲು ಸ್ಥಳೀಯ ಬಿಜೆಪಿ ನಾಯಕರು ಮತ್ತು ಕ್ಷೇತ್ರದ ಶಾಸಕ ಸಚಿವರಾದ ಸುನೀಲ್ ಕುಮಾರ್ ಇವರು ಪಿಡಿಒ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಇದು ಸಂಪೂರ್ಣ ರಾಜಕೀಯ ಪ್ರೇರಿತ. ಬಿಜೆಪಿ ನಾಯಕರು ಕುತಂತ್ರದಿಂದ ಅವರ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಗ್ರಾಮ ಪಂಚಾಯತ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಚಿತ್ರಣದಲ್ಲಿ ಸದಸ್ಯರ ಪಕ್ಕದಲ್ಲಿ ಪಂಚಾಯಿತಿನ ಮಹಿಳಾ ಸಿಬ್ಬಂದಿ ಇದ್ದಾರೆ ಹಾಗಾದರೆ ಅವರ ಸಮ್ಮುಖದಲ್ಲಿ ಕಡತವನ್ನು ಚೀಲಕ್ಕೆ ತುಂಬಿ ಸಲು ಸಾಧ್ಯವೇ ಎಂದು ಮಂಜುನಾಥ್ ಪೂಜಾರಿ ಹೇಳಿದ್ದಾರೆ.
Advertisement. Scroll to continue reading.
ಈ ಕೂಡಲೇ 3ಸದಸ್ಯರ ಮೇಲೆ ನೀಡಿರುವ ದೂರನ್ನು ವಾಪಸ್ ತೆಗೆಯಬೇಕು. ಇಲ್ಲದಿದ್ದರೆ, ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ಮಾಡಲಾಗುವುದೆಂದು ಮಂಜುನಾಥ ಪೂಜಾರಿ ಎಚ್ಚರಿಸಿದರು.
ತನಿಖೆ ನಡೆಸದೆ ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿರುವ ಅಜೆಕಾರ್ ಪೊಲೀಸ್ ಉಪನಿರೀಕ್ಷಕ ಹಾಗೂ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಕಡತಗಳನ್ನು ಹಿಂಪಡೆಯದೆ ಬೇಜವಾಬ್ದಾರಿತನದಿಂದ ವರ್ತಿಸಿದ ಪಿಡಿಒ ಶ್ರೀನಿವಾಸ್ ಅವರನ್ನು ಕೂಡಲೇ ಸಸ್ಪೆಂಡ್ ಮಾಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಶಿರ್ಲಾಲು ಮಾಜಿ ತಾಲ್ಲೂಕು ಸಮಿತಿ ಸದಸ್ಯೆ ಸುನಿತಾ, ಕೆರ್ವಾಸೆ ಪ್ರಕಾಶ್ ಪೂಜಾರಿ, ಜಯ ಕುಮಾರ್ ಜೈನ್ ಸುನೀಲ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ಪ್ರಮುಖರಾದ ದಿನೇಶ್ ಶೆಟ್ಟಿ, ಜನಾರ್ದನ್, ಶಶಿಕಲಾ ಡಿ. ಪೂಜಾರಿ, ಶಶಿಕಲಾ ಆರ್, ಪಿ .ಕರುಣಾಕರ, ವಿಶುಕುಮಾರ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
Advertisement. Scroll to continue reading.