ಬೆಂಗಳೂರು : ಬೆಂಗಳೂರು : ಇಂದು 2022-23 ನೇ ಸಾಲಿನ ಬಜೆಟ್ ನ್ನು ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿದರು. 2 ಲಕ್ಷದ 53 ಸಾವಿರದ 165 ಲಕ್ಷ ಗಾತ್ರದ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು.
ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕೃಷಿಗೆ 33,700 ಕೋಟಿ ರೂ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,478 ಕೋಟಿ ರೂ. ಬೆಂಗಳೂರು ಅಭಿವೃದ್ಧಿಗೆ8,409 ಕೋಟಿ ರೂ.ಮೀಸಲಿಡಲಾಗಿರುವ ಬಗ್ಗೆ ಘೋಷಿಸಿದರು.
Advertisement. Scroll to continue reading.
ರಾಜ್ಯದಲ್ಲಿ ರೈತ ಶಕ್ತಿ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು,ಈ ಯೋಜನೆ ಮೂಲಕ ರೈತರಿಗೆ ಯಂತ್ರೋಪಕರಣ ಉಪಯೋಗಕ್ಕೆ ಸಹಾಯಧನ, 250 ರೂ. ಡೀಸೆಲ್ ಸಹಾಯಧನ ನೀಡಲಾಗುವುದು. 500 ಕೋಟಿ ರೂ. ಯೋಜನೆಗೆ ಒದಗಿಸಲಾಗಿದೆ ಎಂದು ತಿಳಿಸಿದರು. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಸ್ಥಾಪಿಸಲು 50 ಕೋ.ನಿಗದಿ ಪಡಿಸಲಾಗಿದೆ. ರೈತರ ಆದಾಯ ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.