ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ಅವನತಿಯಾಗಲಿದೆ ಎಂಬುದು ಈ ಚುನಾವಣೆಗಳಿಂದ ಸಾಬೀತು : ಬಿ. ವೈ. ರಾಘವೇಂದ್ರ
Published
3
ವರದಿ : ದಿನೇಶ್ ರಾಯಪ್ಪನಮಠ
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ದೇಶವನ್ನು ಬಲಿಷ್ಠಗೊಳಿಸುವ, ಅಭಿವೃದ್ಧಿಪರ ಮತ್ತು ಜನಪರ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡಿರುವ ಸ್ಪಷ್ಟ ಉದಾಹರಣೆಯಾಗಿ ದೇಶದಲ್ಲಿ ಇತ್ತೀಚೆಗೆ ನಡೆದಂತಹ ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಉತ್ತರಪ್ರದೇಶ ಮತ್ತು ಮಣಿಪುರ ಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಹಾಗೂ ಉತ್ತರಖಂಡ್ ಮತ್ತು ಹಾಗೂ ಗೋವಾದಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವುದೇ ಸಾಕ್ಷಿಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ದೇಶದ ಎಲ್ಲ ಮೂಲೆಗಳಲ್ಲಿ ಭಾರತೀಯ ಜನತಾ ಪಕ್ಷ ತನ್ನ ಛಾಪನ್ನು ಮೂಡಿಸಿದ್ದು, ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
Advertisement. Scroll to continue reading.
ಪಂಜಾಬ್ ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೇಸ್ ಅಲ್ಲಿಯೂ ಸಹ ತನ್ನ ಅಸ್ತಿತ್ವಕಳೆದುಕೊಂಡಿದ್ದು, ಕಾಂಗ್ರೆಸ್ ಪಕ್ಷವು ದಿನೇ ದಿನೇ ದೇಶದಲ್ಲಿ ಸಂಪೂರ್ಣವಾಗಿ ಅವನತಿಯಾಗಲಿದೆ ಎಂಬುದನ್ನು ಈ ಚುನಾವಣೆಗಳು ಸಾಬೀತು ಪಡಿಸಿದೆ.
ಗೋವಾದಲ್ಲಿ ಸರ್ಕಾರ ರಚನೆ ಮಾಡಲು ಡಿ.ಕೆ. ಶಿವಕುಮಾರ್ ಮತ್ತು ಉತ್ತರಖಂಡದಲ್ಲಿ ಸರ್ಕಾರ ರಚನೆ ಮಾಡಲು ಎಂ.ಬಿ. ಪಾಟೀಲರವರು ಹೋಗಿದ್ದು, ಬರಿಗೈಲಿ ವಾಪಸಾಗಬೇಕಾಯಿತು.
ಕಾಂಗ್ರೆಸ್ ಪಕ್ಷದವರು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಹಗಲು ಕನಸು ಕಾಣುತ್ತಿರುವುದು. ಕನಸ್ಸಾಗಿಯೇ ಉಳಿಯುವುದು ಈ ಫಲಿತಾಂಶ ಸಾಬೀತುಪಡಿಸಿದೆ. ಕಾಂಗ್ರೆಸ್ ಪಕ್ಷದವರು ಕರ್ನಾಟಕ ರಾಜ್ಯದಲ್ಲಿ ಹಲವು ಸಲ ಕೀಳು ಮಟ್ಟದ ರಾಜಕೀಯ ಮಾಡಿದ್ದನ್ನು ಇಡೀ ಜನತೆಯು ಗಮನಿಸುತ್ತಲೇ ಬಂದಿದ್ದು, ಮುಂಬರುವ ರಾಜ್ಯದ ಚುನಾವಣೆಯಲ್ಲಿ ಮತ್ತೊಮ್ಮೆ ಬಿ.ಜೆ.ಪಿ. ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ಭರವಸೆ ನನಗಿದೆ.
ಇಂತಹ ಅಭೂತಪೂರ್ವ ವಿಜಯಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಜೀ ರವರಿಗೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಜೀಯವರಿಗೆ ಕೇಂದ್ರದ ಎಲ್ಲಾ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಹಾಗೂ ಎಲ್ಲಾ ಮತದಾರ ಬಾಂಧವರಿಗೆ ಹೃತೂರ್ವಕ ಧನ್ಯವಾದಗಳನ್ನು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.