ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಐಶಾರಾಮಿ ಸೌಕರ್ಯ ಪಡೆಯುತ್ತಿದ್ದ ಅರೋಪದಡಿ ದಿವಂಗತ ಜಯಲಲಿತಾ ಆಪ್ತೆ ವಿ.ಕೆ ಶಶಿಕಲಾ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇದೀಗ ವಿ.ಕೆ.ಶಶಿಕಲಾ ಸೇರಿದಂತೆ ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಈ ಪ್ರಕರಣ ಸಂಬಂಧ ಜಯಲಲಿತಾ ಆಪ್ತೆ ವಿ.ಕೆ ಶಶಿಕಲಾ ಸೇರಿದಂತೆ ಇತರ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ಬೆಂಗಳೂರಿನ ಸಿಸಿಹೆಚ್ 24ನೇ ಕೋರ್ಟ್ ನ್ಯಾಯಾಧೀಶರು ನಡೆಸಿದರು.
ಪ್ರಕರಣದಲ್ಲಿ ವಿ.ಕೆ ಶಶಿಕಲ ಸೇರಿದಂತೆ ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
Advertisement. Scroll to continue reading.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಸಂಬಂಧ ಶಶಿಕಲಾ ಹಾಗೂ ಇಳವರಸಿ ಸೇರಿದಂತೆ ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.