ಬೆಂಗಳೂರು: ದೇಶವೇ ಕಾತುರದಿಂದ ಕಾಯುತ್ತಿದ್ದ ಹಿಜಾಬ್ ಅನುಮತಿ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ತೀರ್ಪನ್ನು, ಇಂದು ಹೈಕೋರ್ಟ್ ತ್ರಿಸದಸ್ಯ ನ್ಯಾಯಪೀಠವು ಅಂತಿಮ ತೀರ್ಪನ್ನು ಪ್ರಕಟಿಸಿದೆ. ಇದೇ ವೇಳೇ ನ್ಯಾಯಾಪೀಠ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ನಾವು ಇದನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಎಲ್ಲರೂ ಶಾಂತಿಯನ್ನು ಕಾಪಾಡಬೇಕಾಗಿದೆ. ಸಮಸ್ತ ಜನತೆಗತೆ, ಎಲ್ಲ ಸಮುದಾಯದ ನಾಯಕರಿಗೆ, ಪಾಲಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಕಳಕಳಿಯ ವಿನಂತಿ ಮಾಡುತ್ತಿದ್ದೇನೆ. ನಾವೆಲ್ಲರೂ ಹೈಕೋರ್ಟ್ ತೀರ್ಪು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಮನವಿ ಮಾಡಿದ್ದಾರೆ.
ಶಿಕ್ಷಣ ಬಹಳ ಮುಖ್ಯ ಯಾವುದೇ ಕಾರಣಕ್ಕೆ ವಿದ್ಯಾಭ್ಯಾಸ ಹಾಳು ಮಾಡಿಕೊಳ್ಳಬೇಡಿ. ಪರೀಕ್ಷೆಗಳನ್ನು ತೆಗೆದುಕೊಳ್ಳಿ. ಶಾಲಾ-ಕಾಲೇಜುಗಳಿಂದ ದೂರ ಉಳಿಯಬೇಡಿ ಎಂದಿದ್ದಾರೆ.
Advertisement. Scroll to continue reading.